ಸುದ್ದಿಗಳು

ಎಸ್ ಐ ಚಂದ್ರಶೇಖರ್ ಅವರಿಗೆ ಮಡಿಕೇರಿಗೆ ವರ್ಗಾವಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಬಂಟ್ವಾಳ ನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ ಅವರಿಗೆ ಮಡಿಕೇರಿ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದೆ. ಈ ಹಿಂದೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು 2017 ಅ.16 ರಂದು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.

Advertisement

ಎರಡು ವರುಷಗಳ ಕಾಲ ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಮಡಿಕೇರಿಗೆ ವರ್ಗಾವಣೆಗೊಂಡಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದ ಬಂಟ್ವಾಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ ಶಾಂತಿ ನೆಲೆಸುವಂತೆ ನೋಡಿಕೊಂಡಿದ್ದರು. ಸುಳ್ಯ ಮತ್ತು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ದಕ್ಷ ಮತ್ತು ಜನಪರ ಅಧಿಕಾರಿ ಎಂದು ಹೆಸರು ಮಾಡಿದ್ದ ಖಡಕ್ ಅಧಿಕಾರಿ ಚಂದ್ರಶೇಖರ್ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಒತ್ತು ನೀಡಿದ್ದರು. ಹಲವಾರು ಪ್ರಕರಣಗಳನ್ನು ಭೇದಿಸಿದ್ದರು. ನ.12 ರಂದು ಅವರು ಮಡಿಕೇರಿ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

16 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

16 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

16 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

16 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

17 hours ago