ಸುಳ್ಯ: ಬಂಟ್ವಾಳ ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ ಅವರಿಗೆ ಮಡಿಕೇರಿ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದೆ. ಈ ಹಿಂದೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು 2017 ಅ.16 ರಂದು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ಎರಡು ವರುಷಗಳ ಕಾಲ ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಮಡಿಕೇರಿಗೆ ವರ್ಗಾವಣೆಗೊಂಡಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದ ಬಂಟ್ವಾಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ ಶಾಂತಿ ನೆಲೆಸುವಂತೆ ನೋಡಿಕೊಂಡಿದ್ದರು. ಸುಳ್ಯ ಮತ್ತು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ದಕ್ಷ ಮತ್ತು ಜನಪರ ಅಧಿಕಾರಿ ಎಂದು ಹೆಸರು ಮಾಡಿದ್ದ ಖಡಕ್ ಅಧಿಕಾರಿ ಚಂದ್ರಶೇಖರ್ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಒತ್ತು ನೀಡಿದ್ದರು. ಹಲವಾರು ಪ್ರಕರಣಗಳನ್ನು ಭೇದಿಸಿದ್ದರು. ನ.12 ರಂದು ಅವರು ಮಡಿಕೇರಿ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಸೂಪರ್ ಟೈಫೂನ್ ಬಾವಿ ದುರ್ಬಲವಾಗಿದ್ದರೂ ಪೂರ್ವ ಚೀನಾದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ…
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…
ದಕ್ಷಿಣ ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…
ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…