ಸುಳ್ಯ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನೂತನ ಅಧ್ಯಕ್ಷ ಅಬ್ದುಲ್ ಕಲಾಂ ಅಧ್ಯಕ್ಷತೆಯಲ್ಲಿ ಬೆಳ್ಳಾರೆಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಪ್ರಸ್ತುತ ದೇಶದ ವ್ಯವಸ್ಥೆಗಳ ಮೇಲೆ ನಡೆಯುತ್ತಿರುವ ವಿದ್ಯಮಾನಗಳನ್ನು ತಿಳಿಸುತ್ತಾ, ಅನ್ಯಾಯ ಅಕ್ರಮ ಮೇಳೈಸುತ್ತಿರುವ ಈ ಸಂದರ್ಭದಲ್ಲಿ, ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಜವಾಬ್ದಾರಿಯನ್ನು ಹೊರಲು ಎಸ್.ಡಿ.ಪಿ ಐ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಶಾಫಿ ಬಿ.ಎಂ. ಅರವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.
ನೂತನ ಅಧ್ಯಕ್ಷ ಅಬ್ದುಲ್ ಕಲಾಂ ಅವರನ್ನು ಸನ್ಮಾನಿಲಾಯಿತು. ಬಳಿಕ ಮಾತನಾಡಿದ ಅಬ್ಲುಲ್ ಕಲಾಂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಲು ಕಾರ್ಯಕರ್ತರ ಸಹಕಾರ ಕೋರಿ ದೇಶದ ಪ್ರಸ್ತುತ ಸನ್ನಿವೇಶವನ್ನು ನ್ಯಾಯ ನಿರಾಕರಣೆಯ ಸಂದರ್ಭದಲ್ಲಿ ನ್ಯಾಯ ಸಿಗುವವರೆಗೆ ಬೀದಿಗಿಳಿದು ಹೋರಾಟ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ವಿಧಾನ ಸಭಾ ಕಾರ್ಯದರ್ಶಿ ಮುಸ್ತಫಾ ಎಂ.ಕೆ. ಸ್ವಾಗತಿಸಿದರು.
ವೇದಿಕೆಯಲ್ಲಿ ಹಾಜಿ ಮಮ್ಮಲಿ ಹಾಗು ವಿಧಾನ ಸಭಾ ಸಮಿತಿ ಸದಸ್ಯರು ಹಾಜರಿದ್ದರು. ಸವಣೂರು ವಲಯ ಅಧ್ಯಕ್ಷ ರಝಾಕ್ ಆಂಕತಡ್ಕ ಧನ್ಯವಾದ ಮಾಡಿದರು. ಬೆಳ್ಳಾರೆ ವಲಯ ಅಧ್ಯಕ್ಷ ಫೈಝಲ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…