ಸುಳ್ಯ: ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಪತ್ರಕರ್ತರಿಗೆ ಕೊಡಮಾಡಿದ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಕೋವಿಡ್ ಬಾದೆಯಿಂದ ಜಗತ್ತೇ ಈಗ ಸಂಕಷ್ಟದಲ್ಲಿರುವಾಗ ಪರಸ್ಪರ ಸಹಕಾರ ಮತ್ತು ಸಹಾಯ ಅತೀ ಅಗತ್ಯ. ಈ ನಿಟ್ಟಿನಲ್ಲಿ ಎಸ್ ಡಿಸಿಸಿ ಬ್ಯಾಂಕ್ ನ ಕಾರ್ಯ ಮಾದರಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಮಾತನಾಡಿ ಆಪತ್ತು ಕಾಲದಲ್ಲಿ ಅದನ್ನು ಎದುರಿಸಲು ಸರ್ಕಾರದ ಜೊತೆ ಕೈ ಜೋಡಿಸುವುದರ ಜೊತೆಗೆ ಸಮಾಜದ ಎಲ್ಲರಿಗೂ ಎಸ್ ಸಿ ಡಿಸಿಸಿ ಬ್ಯಾಂಕ್ ಸಹಾಯ ಹಸ್ತವನ್ನು ನೀಡುತಿದೆ. ಕೋವಿಡ್ ಮಹಾ ಮಾರಿಯನ್ನು ಎದುರಿಸುವಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತರು, ಪತ್ರಕರ್ತರು ಮತ್ತಿತರ ವಿಭಾಗಕ್ಕೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್ ಮಾತನಾಡಿ ಪ್ರಳಯ, ಪ್ರಕೃತಿ ವಿಕೋಪ, ಕೋವಿಡ್ ಹೀಗೆ ಯಾವುದೇ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭದಲ್ಲಿಯೂ ಎಸ್ ಸಿಡಿಸಿಸಿ ಬ್ಯಾಂಕ್ ಸಮಾಜಕ್ಕೆ ಸ್ಪಂದನೆ ನೀಡುತಿದೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಮಾತನಾಡಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಜಾಗೃತಿ ಮೂಡಿಸಲು ಪತ್ರಕರ್ತರು ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಪತ್ರಕರ್ತರಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಕರ್ತವ್ಯ ಎಂದರು.
ಸುಳ್ಯ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮತ್ತು ಇತರ ಪತ್ರಕರ್ತರಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಹರೀಶ್ ಬಂಟ್ವಾಳ್ ವಂದಿಸಿದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…