Advertisement
ನಮ್ಮೂರ ಸುದ್ದಿ

ಎಸ್ ‌ಎಸ್ ‌ಎಫ್‌ ವತಿಯಿಂದ ರಕ್ತದಾನ ಶಿಬಿರ

Share

ನಿಂತಿಕಲ್ಲು : ಎಸ್ ‌ಎಸ್ ‌ಎಫ್‌ ನೆಕ್ಕಿಲ ಶಾಖೆ ಇದರ ಆಶ್ರಯದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಸಹಭಾಗಿತ್ವದಲ್ಲಿ 88ನೇಯ ‌ರಕ್ತದಾನ ಶಿಬಿರವು ಯೇನೆಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇವರ ಸಹಯೋಗದೊಂದಿಗೆ  ಖುವ್ವತುಲ್ ಇಸ್ಲಾಂ ಮದ್ರಸ ನೆಕ್ಕಿಲ ಸಂಭಾಗಣದಲ್ಲಿ ನಡೆಯಿತು

Advertisement

ಕಾರ್ಯಕ್ರಮದಲ್ಲಿ ಶಾಖಾ ಅಧ್ಯಕ್ಷರು ಅಝೀಝ್ ಪಿ ಎ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ಭಾಷಣ ಗೈದರು. ಬದ್ರಿಯಾ ಜುಮ್ಮಾ ಮಸೀದಿ ನೆಕ್ಕಿಲ ಇದರ ಮುದರ್ರಿಸರು ಝಿಯಾದ್ ಸಖಾಫಿ ಬಾರಬೆಟ್ಟು ದುಆ ನೆರವೆರಿಸಿದರು. ಕಾರ್ಯಕ್ರಮವನ್ನು ದೇವಿಪ್ರಸಾದ್ ಜಾಕೆ ಸ್ಥಾಪಕಾಧ್ಯಕ್ಷ ರು ಜೆ ಸಿ ಐ ಪಂಜ ಉದ್ಘಾಟಿಸಿ ರಕ್ತದಾನದ ಮಹತ್ವ ಕುರಿತು ತಿಳಿಸುತ್ತಾ ರಕ್ತದಾನದಿಂದ ಪಡೆದುಕೊಳ್ಳುವುದೇ ಹೆಚ್ಚು ಕಳೆದುಕೊಳ್ಳುವುದು ಕಮ್ಮಿ ಎಂದು ಹಿತವಚನ ಗೈದರು, ಬಿ.ಜೆ.ಎಂ ಅಧ್ಯಕ್ಷರು ಉಮರ್ ಸೀಗೆಯಡಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಎಸ್ ಎಸ್ ಎಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರು ಜಬ್ಬಾರ್ ಹನೀಫಿ ,ವಾಚಣ್ಣ ಕೆರೆಮೂಲೆ, ಮಹೇಶ್ ಕೋಟೆ, ಕಾರ್ಯಕ್ರಮ ಆಶಂಸ ನೀಡಿದರು. ಎಸ್ .ಎಸ್.ಎಫ್ . ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಮಹಮ್ಮದ್ ಕರೀಂ ಬೋಳಂತೂರು ಅವರಿಗೆ ಮತ್ತು ಯೇನೆಪೋಯ ಮೆಡಿಕಲ್ ಕಾಲೇಜಿಗೆ ಸ್ಮರಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಫ್ ಬ್ಲಡ್ ಸೈಬೋ ಸುಳ್ಯ ಡಿವಿಷನ್ ಉಸ್ತುವಾರಿಗಳಾದ ಸಿದ್ದೀಕ್ ಗೂನಡ್ಕ , ರಿಯಾಝ್ ಪಿ ವೈ ನೆಕ್ಕಿಲ , ಅಬೂಬಕ್ಕರ್ ಪಾಂಡಿಗದ್ದೆ,ಎಸ್ ಎಸ್ ಎಫ್ ನೆಕ್ಕಿಲ ಶಾಖಾ ಕಾರ್ಯದರ್ಶಿ ರಝಾಕ್ ಕೆ ಹೆಚ್,ಎಸ್.ಎಂ.ಎ ಬೈತಡ್ಕ ರೀಜನಲ್ ಅಧ್ಯಕ್ಷರು ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ , ಉಪಸ್ಥಿತರಿದ್ದರು.

ಸುಮಾರು ಹತ್ತು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೂ ರಕ್ತದಾನ ಶಿಬಿರವು ಮುಂದುವರೆದಿದ್ದೂ ,60 ಕ್ಕಿಂತಲೂ ಹೆಚ್ಚು ಜನರು ಪಾಲ್ಗೊಂಡು ರಕ್ತದಾನ ಮಾಡಿದರು.
ಸುಳ್ಯ ಎಸ್ಸೆಸ್ಸೆಫ್ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹ್ರಿ ಸ್ವಾಗತಿಸಿ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕೋಶಾಧಿಕಾರಿ ಹಸೈನಾರ್ ನೆಲ್ಲಿಕಟ್ಟೆ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

7 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

13 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

17 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

17 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

17 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago