Advertisement
ನಮ್ಮೂರ ಸುದ್ದಿ

ಎಸ್ ‌ಎಸ್ ‌ಎಫ್‌ ವತಿಯಿಂದ ರಕ್ತದಾನ ಶಿಬಿರ

Share

ನಿಂತಿಕಲ್ಲು : ಎಸ್ ‌ಎಸ್ ‌ಎಫ್‌ ನೆಕ್ಕಿಲ ಶಾಖೆ ಇದರ ಆಶ್ರಯದಲ್ಲಿ ಎಸ್ ಎಸ್ ಎಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಸಹಭಾಗಿತ್ವದಲ್ಲಿ 88ನೇಯ ‌ರಕ್ತದಾನ ಶಿಬಿರವು ಯೇನೆಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇವರ ಸಹಯೋಗದೊಂದಿಗೆ  ಖುವ್ವತುಲ್ ಇಸ್ಲಾಂ ಮದ್ರಸ ನೆಕ್ಕಿಲ ಸಂಭಾಗಣದಲ್ಲಿ ನಡೆಯಿತು

ಕಾರ್ಯಕ್ರಮದಲ್ಲಿ ಶಾಖಾ ಅಧ್ಯಕ್ಷರು ಅಝೀಝ್ ಪಿ ಎ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ಭಾಷಣ ಗೈದರು. ಬದ್ರಿಯಾ ಜುಮ್ಮಾ ಮಸೀದಿ ನೆಕ್ಕಿಲ ಇದರ ಮುದರ್ರಿಸರು ಝಿಯಾದ್ ಸಖಾಫಿ ಬಾರಬೆಟ್ಟು ದುಆ ನೆರವೆರಿಸಿದರು. ಕಾರ್ಯಕ್ರಮವನ್ನು ದೇವಿಪ್ರಸಾದ್ ಜಾಕೆ ಸ್ಥಾಪಕಾಧ್ಯಕ್ಷ ರು ಜೆ ಸಿ ಐ ಪಂಜ ಉದ್ಘಾಟಿಸಿ ರಕ್ತದಾನದ ಮಹತ್ವ ಕುರಿತು ತಿಳಿಸುತ್ತಾ ರಕ್ತದಾನದಿಂದ ಪಡೆದುಕೊಳ್ಳುವುದೇ ಹೆಚ್ಚು ಕಳೆದುಕೊಳ್ಳುವುದು ಕಮ್ಮಿ ಎಂದು ಹಿತವಚನ ಗೈದರು, ಬಿ.ಜೆ.ಎಂ ಅಧ್ಯಕ್ಷರು ಉಮರ್ ಸೀಗೆಯಡಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಎಸ್ ಎಸ್ ಎಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರು ಜಬ್ಬಾರ್ ಹನೀಫಿ ,ವಾಚಣ್ಣ ಕೆರೆಮೂಲೆ, ಮಹೇಶ್ ಕೋಟೆ, ಕಾರ್ಯಕ್ರಮ ಆಶಂಸ ನೀಡಿದರು. ಎಸ್ .ಎಸ್.ಎಫ್ . ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಮಹಮ್ಮದ್ ಕರೀಂ ಬೋಳಂತೂರು ಅವರಿಗೆ ಮತ್ತು ಯೇನೆಪೋಯ ಮೆಡಿಕಲ್ ಕಾಲೇಜಿಗೆ ಸ್ಮರಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಫ್ ಬ್ಲಡ್ ಸೈಬೋ ಸುಳ್ಯ ಡಿವಿಷನ್ ಉಸ್ತುವಾರಿಗಳಾದ ಸಿದ್ದೀಕ್ ಗೂನಡ್ಕ , ರಿಯಾಝ್ ಪಿ ವೈ ನೆಕ್ಕಿಲ , ಅಬೂಬಕ್ಕರ್ ಪಾಂಡಿಗದ್ದೆ,ಎಸ್ ಎಸ್ ಎಫ್ ನೆಕ್ಕಿಲ ಶಾಖಾ ಕಾರ್ಯದರ್ಶಿ ರಝಾಕ್ ಕೆ ಹೆಚ್,ಎಸ್.ಎಂ.ಎ ಬೈತಡ್ಕ ರೀಜನಲ್ ಅಧ್ಯಕ್ಷರು ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ , ಉಪಸ್ಥಿತರಿದ್ದರು.

ಸುಮಾರು ಹತ್ತು ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೂ ರಕ್ತದಾನ ಶಿಬಿರವು ಮುಂದುವರೆದಿದ್ದೂ ,60 ಕ್ಕಿಂತಲೂ ಹೆಚ್ಚು ಜನರು ಪಾಲ್ಗೊಂಡು ರಕ್ತದಾನ ಮಾಡಿದರು.
ಸುಳ್ಯ ಎಸ್ಸೆಸ್ಸೆಫ್ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹ್ರಿ ಸ್ವಾಗತಿಸಿ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಕೋಶಾಧಿಕಾರಿ ಹಸೈನಾರ್ ನೆಲ್ಲಿಕಟ್ಟೆ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

14 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

15 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago