ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ ಪುತ್ತೂರು ಸಹಾಯಕ ಕಮೀಷನರ್ ಹಾಗು ಕುಕ್ಕೆ ದೇಗುಲದ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಅಭಿವೃದ್ಧಿ ಕಾಮಗಾರಿಗಳ ಮತ್ತು ಷಷ್ಠಿ ಮಹೋತ್ಸವದ ಪೂರ್ವ ತಯಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕುಮಾರಧಾರ ಬಳಿ ಇದ್ದ ಲಗೇಜು ಕೊಠಡಿಗೆ ಕುಡಿಯುವ ನೀರಿನ ವ್ಯವಸ್ಥೆ ಗೆ ಎ.ಸಿ ಯವರು ಸೂಚಿಸಿದರು.
ಸ್ನಾನ ಘಟ್ಟದ ಬಳಿ ಇದ್ದ ಕಾರ್ಯನಿರ್ವಹಿಸುವ ಸೆಕ್ಯುರಿಟಿಗಳಿಗೆ ತಾತ್ಕಾಲಿಕ ವಿಶ್ರಾಂತಿಗೆ ವ್ಯವಸ್ಥೆ ಮಾಡುವಂತೆ, ಕುಮಾರಧಾರ ಸ್ನಾನ ಘಟ್ಟದ ವ್ಯಾಪ್ತಿಯಲ್ಲಿ ವ್ಯವಸ್ಥಿತ ಸಿ.ಸಿ ಕ್ಯಾಮರ ಹಾಕುವಂತೆ ತಿಳಿಸಿದರು. ಕುಮಾರಧಾರ ಸ್ನಾನ ಘಟ್ಟದ ಬಳಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರವುಗೊಳಿಸಲು ಸೂಚಿಸಿದರು. ಕುಮಾರಧಾರ ಪ್ರವೇಶ ದ್ವಾರದ ಆಸುಪಾಸಿನ ಮರಗಳನ್ನು ತೆರವುಗೊಳಿಸಿ ರಸ್ತೆಯ ಕೆಲಸಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭ ದೇವಾಲಯದ ಸಹಾಯಕ ಉಪಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಪಿ.ಡಬ್ಯೂ.ಡಿ ಯ ಹನುಮಂತ ರಾಯಪ್ಪ, ಶ್ರೀನಿವಾಸ್, ದೇವಾಲಯದ ಇಂಜಿನಿಯರ್ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…