ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ ಪುತ್ತೂರು ಸಹಾಯಕ ಕಮೀಷನರ್ ಹಾಗು ಕುಕ್ಕೆ ದೇಗುಲದ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಅಭಿವೃದ್ಧಿ ಕಾಮಗಾರಿಗಳ ಮತ್ತು ಷಷ್ಠಿ ಮಹೋತ್ಸವದ ಪೂರ್ವ ತಯಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕುಮಾರಧಾರ ಬಳಿ ಇದ್ದ ಲಗೇಜು ಕೊಠಡಿಗೆ ಕುಡಿಯುವ ನೀರಿನ ವ್ಯವಸ್ಥೆ ಗೆ ಎ.ಸಿ ಯವರು ಸೂಚಿಸಿದರು.
ಸ್ನಾನ ಘಟ್ಟದ ಬಳಿ ಇದ್ದ ಕಾರ್ಯನಿರ್ವಹಿಸುವ ಸೆಕ್ಯುರಿಟಿಗಳಿಗೆ ತಾತ್ಕಾಲಿಕ ವಿಶ್ರಾಂತಿಗೆ ವ್ಯವಸ್ಥೆ ಮಾಡುವಂತೆ, ಕುಮಾರಧಾರ ಸ್ನಾನ ಘಟ್ಟದ ವ್ಯಾಪ್ತಿಯಲ್ಲಿ ವ್ಯವಸ್ಥಿತ ಸಿ.ಸಿ ಕ್ಯಾಮರ ಹಾಕುವಂತೆ ತಿಳಿಸಿದರು. ಕುಮಾರಧಾರ ಸ್ನಾನ ಘಟ್ಟದ ಬಳಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರವುಗೊಳಿಸಲು ಸೂಚಿಸಿದರು. ಕುಮಾರಧಾರ ಪ್ರವೇಶ ದ್ವಾರದ ಆಸುಪಾಸಿನ ಮರಗಳನ್ನು ತೆರವುಗೊಳಿಸಿ ರಸ್ತೆಯ ಕೆಲಸಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭ ದೇವಾಲಯದ ಸಹಾಯಕ ಉಪಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಪಿ.ಡಬ್ಯೂ.ಡಿ ಯ ಹನುಮಂತ ರಾಯಪ್ಪ, ಶ್ರೀನಿವಾಸ್, ದೇವಾಲಯದ ಇಂಜಿನಿಯರ್ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…