ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ ಪುತ್ತೂರು ಸಹಾಯಕ ಕಮೀಷನರ್ ಹಾಗು ಕುಕ್ಕೆ ದೇಗುಲದ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಅಭಿವೃದ್ಧಿ ಕಾಮಗಾರಿಗಳ ಮತ್ತು ಷಷ್ಠಿ ಮಹೋತ್ಸವದ ಪೂರ್ವ ತಯಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕುಮಾರಧಾರ ಬಳಿ ಇದ್ದ ಲಗೇಜು ಕೊಠಡಿಗೆ ಕುಡಿಯುವ ನೀರಿನ ವ್ಯವಸ್ಥೆ ಗೆ ಎ.ಸಿ ಯವರು ಸೂಚಿಸಿದರು.
ಸ್ನಾನ ಘಟ್ಟದ ಬಳಿ ಇದ್ದ ಕಾರ್ಯನಿರ್ವಹಿಸುವ ಸೆಕ್ಯುರಿಟಿಗಳಿಗೆ ತಾತ್ಕಾಲಿಕ ವಿಶ್ರಾಂತಿಗೆ ವ್ಯವಸ್ಥೆ ಮಾಡುವಂತೆ, ಕುಮಾರಧಾರ ಸ್ನಾನ ಘಟ್ಟದ ವ್ಯಾಪ್ತಿಯಲ್ಲಿ ವ್ಯವಸ್ಥಿತ ಸಿ.ಸಿ ಕ್ಯಾಮರ ಹಾಕುವಂತೆ ತಿಳಿಸಿದರು. ಕುಮಾರಧಾರ ಸ್ನಾನ ಘಟ್ಟದ ಬಳಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರವುಗೊಳಿಸಲು ಸೂಚಿಸಿದರು. ಕುಮಾರಧಾರ ಪ್ರವೇಶ ದ್ವಾರದ ಆಸುಪಾಸಿನ ಮರಗಳನ್ನು ತೆರವುಗೊಳಿಸಿ ರಸ್ತೆಯ ಕೆಲಸಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭ ದೇವಾಲಯದ ಸಹಾಯಕ ಉಪಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಪಿ.ಡಬ್ಯೂ.ಡಿ ಯ ಹನುಮಂತ ರಾಯಪ್ಪ, ಶ್ರೀನಿವಾಸ್, ದೇವಾಲಯದ ಇಂಜಿನಿಯರ್ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…