ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ ಪುತ್ತೂರು ಸಹಾಯಕ ಕಮೀಷನರ್ ಹಾಗು ಕುಕ್ಕೆ ದೇಗುಲದ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಅಭಿವೃದ್ಧಿ ಕಾಮಗಾರಿಗಳ ಮತ್ತು ಷಷ್ಠಿ ಮಹೋತ್ಸವದ ಪೂರ್ವ ತಯಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕುಮಾರಧಾರ ಬಳಿ ಇದ್ದ ಲಗೇಜು ಕೊಠಡಿಗೆ ಕುಡಿಯುವ ನೀರಿನ ವ್ಯವಸ್ಥೆ ಗೆ ಎ.ಸಿ ಯವರು ಸೂಚಿಸಿದರು.
ಸ್ನಾನ ಘಟ್ಟದ ಬಳಿ ಇದ್ದ ಕಾರ್ಯನಿರ್ವಹಿಸುವ ಸೆಕ್ಯುರಿಟಿಗಳಿಗೆ ತಾತ್ಕಾಲಿಕ ವಿಶ್ರಾಂತಿಗೆ ವ್ಯವಸ್ಥೆ ಮಾಡುವಂತೆ, ಕುಮಾರಧಾರ ಸ್ನಾನ ಘಟ್ಟದ ವ್ಯಾಪ್ತಿಯಲ್ಲಿ ವ್ಯವಸ್ಥಿತ ಸಿ.ಸಿ ಕ್ಯಾಮರ ಹಾಕುವಂತೆ ತಿಳಿಸಿದರು. ಕುಮಾರಧಾರ ಸ್ನಾನ ಘಟ್ಟದ ಬಳಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರವುಗೊಳಿಸಲು ಸೂಚಿಸಿದರು. ಕುಮಾರಧಾರ ಪ್ರವೇಶ ದ್ವಾರದ ಆಸುಪಾಸಿನ ಮರಗಳನ್ನು ತೆರವುಗೊಳಿಸಿ ರಸ್ತೆಯ ಕೆಲಸಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭ ದೇವಾಲಯದ ಸಹಾಯಕ ಉಪಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಪಿ.ಡಬ್ಯೂ.ಡಿ ಯ ಹನುಮಂತ ರಾಯಪ್ಪ, ಶ್ರೀನಿವಾಸ್, ದೇವಾಲಯದ ಇಂಜಿನಿಯರ್ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…