ಸುಳ್ಯ: ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ ಪುತ್ತೂರು ಸಹಾಯಕ ಕಮೀಷನರ್ ಹಾಗು ಕುಕ್ಕೆ ದೇಗುಲದ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಅಭಿವೃದ್ಧಿ ಕಾಮಗಾರಿಗಳ ಮತ್ತು ಷಷ್ಠಿ ಮಹೋತ್ಸವದ ಪೂರ್ವ ತಯಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕುಮಾರಧಾರ ಬಳಿ ಇದ್ದ ಲಗೇಜು ಕೊಠಡಿಗೆ ಕುಡಿಯುವ ನೀರಿನ ವ್ಯವಸ್ಥೆ ಗೆ ಎ.ಸಿ ಯವರು ಸೂಚಿಸಿದರು.
ಸ್ನಾನ ಘಟ್ಟದ ಬಳಿ ಇದ್ದ ಕಾರ್ಯನಿರ್ವಹಿಸುವ ಸೆಕ್ಯುರಿಟಿಗಳಿಗೆ ತಾತ್ಕಾಲಿಕ ವಿಶ್ರಾಂತಿಗೆ ವ್ಯವಸ್ಥೆ ಮಾಡುವಂತೆ, ಕುಮಾರಧಾರ ಸ್ನಾನ ಘಟ್ಟದ ವ್ಯಾಪ್ತಿಯಲ್ಲಿ ವ್ಯವಸ್ಥಿತ ಸಿ.ಸಿ ಕ್ಯಾಮರ ಹಾಕುವಂತೆ ತಿಳಿಸಿದರು. ಕುಮಾರಧಾರ ಸ್ನಾನ ಘಟ್ಟದ ಬಳಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರವುಗೊಳಿಸಲು ಸೂಚಿಸಿದರು. ಕುಮಾರಧಾರ ಪ್ರವೇಶ ದ್ವಾರದ ಆಸುಪಾಸಿನ ಮರಗಳನ್ನು ತೆರವುಗೊಳಿಸಿ ರಸ್ತೆಯ ಕೆಲಸಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭ ದೇವಾಲಯದ ಸಹಾಯಕ ಉಪಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಪಿ.ಡಬ್ಯೂ.ಡಿ ಯ ಹನುಮಂತ ರಾಯಪ್ಪ, ಶ್ರೀನಿವಾಸ್, ದೇವಾಲಯದ ಇಂಜಿನಿಯರ್ ಉದಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…