Advertisement

ಎ.20 : ಬೆಳ್ಳಾರೆಯಲ್ಲಿ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಕಬಡ್ಡಿ ಪಂದ್ಯಾಟ

Share

ಸುಳ್ಯ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಸುಳ್ಯ, ಪುತ್ತೂರು, ಕಡಬ ತಾ.ಸಮಿತಿ ಮತ್ತು ದ.ಕ.ಜಿಲ್ಲಾ ಸಮಿತಿ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ಜನ್ಮ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 13 ನೇ ವರ್ಷದ ಮಹಿಳಾ ಮತ್ತು ಪುರುಷರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟವು ಎ.20 ರಂದು ಬೆಳ್ಳಾರೆ ಜ್ಞಾನಗಂಗಾ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ.ಸಂ.ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಹೇಳಿದ್ದಾರೆ.
ಸುಳ್ಯದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜೇಶ್ವರಿ ಆರ್.ಭಟ್ ಬಾಳಿಲ ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ಸಂಚಾಲಕ ದಿನೇಶ್ ವೀರಮಂಗಲ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಜಪ್ಪ ರೈ ಬೆಳ್ಳಾರೆ, ಶಕುಂತಳಾ, ನಳಿನಾಕ್ಷಿ, ಜಯಪ್ರಕಾಶ್ ರೈ, ಸುನಿಲ್ ರೈ ಪೆರುವಾಜೆ, ಕುಂಬ್ರ ದಯಾಕರ ಆಳ್ವ ಮೊದಲಾದವರು ಭಾಗವಹಿಸಲಿದ್ದಾರೆ. ಸಂಜೆ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಯು.ಕೆ.ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮೋಹನ ಗೌಡ ಇಡ್ಯಡ್ಕ ಉದ್ಘಾಟಿಸಲಿದ್ದಾರೆ. ಅಜಯ್ ಬಿ.ಸಿ.ರೋಡು ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎ.21 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವೆಗಾಗಿ ಬಾಬು ಭಂಡಾರಿ, ಅಂತಾರಾಷ್ಟ್ರೀಯ ಕ್ರೀಡಾಪಟು ಸುನಂದ ರೈ, ಎಂಜಿನಿಯರ್ ಮಹಮ್ಮದ್ ಬೆಳ್ಳಾರೆ, ಸಮಾಜ ಸೇವೆಗಾಗಿ ಹನೀಫ್ ಸಾಹೇಬ್ ಪಾಜಪಳ್ಳ, ಚಲನಚಿತ್ರ ನಟ ಮೋಹನ್ ಶೇಣಿ ಮೊದಲಾದವರು ಸಮ್ಮಾನಿಸಲಾಗುವುದು ಎಂದು ಹೇಳಿದರು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಬೆಳಗ್ಗೆ ಉದ್ಘಾಟನಾ ಸಮಾರಂಭದ ಬಳಿಕ ಮಹಿಳಾ ವಿಭಾಗದ 6 ತಂಡಗಳ ಮಧ್ಯೆ ಕಬಡ್ಡಿ ಪಂದ್ಯಾಟ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ತಾಲೂಕಿನ ತಂಡಗಳು ಭಾಗವಹಿಸಲಿವೆ. ರಾತ್ರಿ ನಡೆಯುವ ಪುರುಷರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು, ಸುಳ್ಯ, ಕಡಬ ತಾಲೂಕಿನ 16 ತಂಡಗಳು ಭಾಗವಹಿಸಲಿವೆ. ಪಂದ್ಯಾಟವು ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಮ್ಯಾಟ್ ಅಂಕಣದ ವ್ಯವಸ್ಥೆ ಮಾಡಲಾಗುವುದು. ವಿಜೇತರಿಗೆ ನಗದು ಸಹಿತ ಟ್ರೋಫಿ ಬಹುಮಾನವಿದೆ ಎಂದು ಅವರು ವಿವರಿಸಿದರು. ಪತ್ರಿಕಾಗೋಷ್ಟಿಯಲ್ಲಿ ದ.ಸಂ.ಸ.ತಾಲೂಕು ಸಂಚಾಲಕ ಅಚ್ಚುತ ಮಲ್ಕಜೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

18 minutes ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

47 minutes ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

54 minutes ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago