Advertisement

ಎ.20 : ಬೆಳ್ಳಾರೆಯಲ್ಲಿ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಕಬಡ್ಡಿ ಪಂದ್ಯಾಟ

Share

ಸುಳ್ಯ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಸುಳ್ಯ, ಪುತ್ತೂರು, ಕಡಬ ತಾ.ಸಮಿತಿ ಮತ್ತು ದ.ಕ.ಜಿಲ್ಲಾ ಸಮಿತಿ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ಜನ್ಮ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 13 ನೇ ವರ್ಷದ ಮಹಿಳಾ ಮತ್ತು ಪುರುಷರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟವು ಎ.20 ರಂದು ಬೆಳ್ಳಾರೆ ಜ್ಞಾನಗಂಗಾ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ.ಸಂ.ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಹೇಳಿದ್ದಾರೆ.
ಸುಳ್ಯದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜೇಶ್ವರಿ ಆರ್.ಭಟ್ ಬಾಳಿಲ ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ಸಂಚಾಲಕ ದಿನೇಶ್ ವೀರಮಂಗಲ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಜಪ್ಪ ರೈ ಬೆಳ್ಳಾರೆ, ಶಕುಂತಳಾ, ನಳಿನಾಕ್ಷಿ, ಜಯಪ್ರಕಾಶ್ ರೈ, ಸುನಿಲ್ ರೈ ಪೆರುವಾಜೆ, ಕುಂಬ್ರ ದಯಾಕರ ಆಳ್ವ ಮೊದಲಾದವರು ಭಾಗವಹಿಸಲಿದ್ದಾರೆ. ಸಂಜೆ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಯು.ಕೆ.ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮೋಹನ ಗೌಡ ಇಡ್ಯಡ್ಕ ಉದ್ಘಾಟಿಸಲಿದ್ದಾರೆ. ಅಜಯ್ ಬಿ.ಸಿ.ರೋಡು ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎ.21 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವೆಗಾಗಿ ಬಾಬು ಭಂಡಾರಿ, ಅಂತಾರಾಷ್ಟ್ರೀಯ ಕ್ರೀಡಾಪಟು ಸುನಂದ ರೈ, ಎಂಜಿನಿಯರ್ ಮಹಮ್ಮದ್ ಬೆಳ್ಳಾರೆ, ಸಮಾಜ ಸೇವೆಗಾಗಿ ಹನೀಫ್ ಸಾಹೇಬ್ ಪಾಜಪಳ್ಳ, ಚಲನಚಿತ್ರ ನಟ ಮೋಹನ್ ಶೇಣಿ ಮೊದಲಾದವರು ಸಮ್ಮಾನಿಸಲಾಗುವುದು ಎಂದು ಹೇಳಿದರು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಬೆಳಗ್ಗೆ ಉದ್ಘಾಟನಾ ಸಮಾರಂಭದ ಬಳಿಕ ಮಹಿಳಾ ವಿಭಾಗದ 6 ತಂಡಗಳ ಮಧ್ಯೆ ಕಬಡ್ಡಿ ಪಂದ್ಯಾಟ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ತಾಲೂಕಿನ ತಂಡಗಳು ಭಾಗವಹಿಸಲಿವೆ. ರಾತ್ರಿ ನಡೆಯುವ ಪುರುಷರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು, ಸುಳ್ಯ, ಕಡಬ ತಾಲೂಕಿನ 16 ತಂಡಗಳು ಭಾಗವಹಿಸಲಿವೆ. ಪಂದ್ಯಾಟವು ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಮ್ಯಾಟ್ ಅಂಕಣದ ವ್ಯವಸ್ಥೆ ಮಾಡಲಾಗುವುದು. ವಿಜೇತರಿಗೆ ನಗದು ಸಹಿತ ಟ್ರೋಫಿ ಬಹುಮಾನವಿದೆ ಎಂದು ಅವರು ವಿವರಿಸಿದರು. ಪತ್ರಿಕಾಗೋಷ್ಟಿಯಲ್ಲಿ ದ.ಸಂ.ಸ.ತಾಲೂಕು ಸಂಚಾಲಕ ಅಚ್ಚುತ ಮಲ್ಕಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

5 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

22 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

22 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago