Advertisement

ಎ.20 : ಬೆಳ್ಳಾರೆಯಲ್ಲಿ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಕಬಡ್ಡಿ ಪಂದ್ಯಾಟ

Share

ಸುಳ್ಯ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಸುಳ್ಯ, ಪುತ್ತೂರು, ಕಡಬ ತಾ.ಸಮಿತಿ ಮತ್ತು ದ.ಕ.ಜಿಲ್ಲಾ ಸಮಿತಿ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ಜನ್ಮ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 13 ನೇ ವರ್ಷದ ಮಹಿಳಾ ಮತ್ತು ಪುರುಷರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟವು ಎ.20 ರಂದು ಬೆಳ್ಳಾರೆ ಜ್ಞಾನಗಂಗಾ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ.ಸಂ.ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಹೇಳಿದ್ದಾರೆ.
ಸುಳ್ಯದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜೇಶ್ವರಿ ಆರ್.ಭಟ್ ಬಾಳಿಲ ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ಸಂಚಾಲಕ ದಿನೇಶ್ ವೀರಮಂಗಲ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಜಪ್ಪ ರೈ ಬೆಳ್ಳಾರೆ, ಶಕುಂತಳಾ, ನಳಿನಾಕ್ಷಿ, ಜಯಪ್ರಕಾಶ್ ರೈ, ಸುನಿಲ್ ರೈ ಪೆರುವಾಜೆ, ಕುಂಬ್ರ ದಯಾಕರ ಆಳ್ವ ಮೊದಲಾದವರು ಭಾಗವಹಿಸಲಿದ್ದಾರೆ. ಸಂಜೆ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಯು.ಕೆ.ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮೋಹನ ಗೌಡ ಇಡ್ಯಡ್ಕ ಉದ್ಘಾಟಿಸಲಿದ್ದಾರೆ. ಅಜಯ್ ಬಿ.ಸಿ.ರೋಡು ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎ.21 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವೆಗಾಗಿ ಬಾಬು ಭಂಡಾರಿ, ಅಂತಾರಾಷ್ಟ್ರೀಯ ಕ್ರೀಡಾಪಟು ಸುನಂದ ರೈ, ಎಂಜಿನಿಯರ್ ಮಹಮ್ಮದ್ ಬೆಳ್ಳಾರೆ, ಸಮಾಜ ಸೇವೆಗಾಗಿ ಹನೀಫ್ ಸಾಹೇಬ್ ಪಾಜಪಳ್ಳ, ಚಲನಚಿತ್ರ ನಟ ಮೋಹನ್ ಶೇಣಿ ಮೊದಲಾದವರು ಸಮ್ಮಾನಿಸಲಾಗುವುದು ಎಂದು ಹೇಳಿದರು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಬೆಳಗ್ಗೆ ಉದ್ಘಾಟನಾ ಸಮಾರಂಭದ ಬಳಿಕ ಮಹಿಳಾ ವಿಭಾಗದ 6 ತಂಡಗಳ ಮಧ್ಯೆ ಕಬಡ್ಡಿ ಪಂದ್ಯಾಟ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ತಾಲೂಕಿನ ತಂಡಗಳು ಭಾಗವಹಿಸಲಿವೆ. ರಾತ್ರಿ ನಡೆಯುವ ಪುರುಷರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು, ಸುಳ್ಯ, ಕಡಬ ತಾಲೂಕಿನ 16 ತಂಡಗಳು ಭಾಗವಹಿಸಲಿವೆ. ಪಂದ್ಯಾಟವು ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಮ್ಯಾಟ್ ಅಂಕಣದ ವ್ಯವಸ್ಥೆ ಮಾಡಲಾಗುವುದು. ವಿಜೇತರಿಗೆ ನಗದು ಸಹಿತ ಟ್ರೋಫಿ ಬಹುಮಾನವಿದೆ ಎಂದು ಅವರು ವಿವರಿಸಿದರು. ಪತ್ರಿಕಾಗೋಷ್ಟಿಯಲ್ಲಿ ದ.ಸಂ.ಸ.ತಾಲೂಕು ಸಂಚಾಲಕ ಅಚ್ಚುತ ಮಲ್ಕಜೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago