Advertisement

ಎ.20 : ಬೆಳ್ಳಾರೆಯಲ್ಲಿ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಕಬಡ್ಡಿ ಪಂದ್ಯಾಟ

Share

ಸುಳ್ಯ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಸುಳ್ಯ, ಪುತ್ತೂರು, ಕಡಬ ತಾ.ಸಮಿತಿ ಮತ್ತು ದ.ಕ.ಜಿಲ್ಲಾ ಸಮಿತಿ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ಜನ್ಮ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ ಹಾಗೂ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 13 ನೇ ವರ್ಷದ ಮಹಿಳಾ ಮತ್ತು ಪುರುಷರ ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟವು ಎ.20 ರಂದು ಬೆಳ್ಳಾರೆ ಜ್ಞಾನಗಂಗಾ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ.ಸಂ.ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಹೇಳಿದ್ದಾರೆ.
ಸುಳ್ಯದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜೇಶ್ವರಿ ಆರ್.ಭಟ್ ಬಾಳಿಲ ಉದ್ಘಾಟಿಸಲಿದ್ದಾರೆ. ಪುತ್ತೂರು ತಾಲೂಕು ಸಂಚಾಲಕ ದಿನೇಶ್ ವೀರಮಂಗಲ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಜಪ್ಪ ರೈ ಬೆಳ್ಳಾರೆ, ಶಕುಂತಳಾ, ನಳಿನಾಕ್ಷಿ, ಜಯಪ್ರಕಾಶ್ ರೈ, ಸುನಿಲ್ ರೈ ಪೆರುವಾಜೆ, ಕುಂಬ್ರ ದಯಾಕರ ಆಳ್ವ ಮೊದಲಾದವರು ಭಾಗವಹಿಸಲಿದ್ದಾರೆ. ಸಂಜೆ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಯು.ಕೆ.ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮೋಹನ ಗೌಡ ಇಡ್ಯಡ್ಕ ಉದ್ಘಾಟಿಸಲಿದ್ದಾರೆ. ಅಜಯ್ ಬಿ.ಸಿ.ರೋಡು ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎ.21 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಸೇವೆಗಾಗಿ ಬಾಬು ಭಂಡಾರಿ, ಅಂತಾರಾಷ್ಟ್ರೀಯ ಕ್ರೀಡಾಪಟು ಸುನಂದ ರೈ, ಎಂಜಿನಿಯರ್ ಮಹಮ್ಮದ್ ಬೆಳ್ಳಾರೆ, ಸಮಾಜ ಸೇವೆಗಾಗಿ ಹನೀಫ್ ಸಾಹೇಬ್ ಪಾಜಪಳ್ಳ, ಚಲನಚಿತ್ರ ನಟ ಮೋಹನ್ ಶೇಣಿ ಮೊದಲಾದವರು ಸಮ್ಮಾನಿಸಲಾಗುವುದು ಎಂದು ಹೇಳಿದರು.
ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಬೆಳಗ್ಗೆ ಉದ್ಘಾಟನಾ ಸಮಾರಂಭದ ಬಳಿಕ ಮಹಿಳಾ ವಿಭಾಗದ 6 ತಂಡಗಳ ಮಧ್ಯೆ ಕಬಡ್ಡಿ ಪಂದ್ಯಾಟ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ತಾಲೂಕಿನ ತಂಡಗಳು ಭಾಗವಹಿಸಲಿವೆ. ರಾತ್ರಿ ನಡೆಯುವ ಪುರುಷರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು, ಸುಳ್ಯ, ಕಡಬ ತಾಲೂಕಿನ 16 ತಂಡಗಳು ಭಾಗವಹಿಸಲಿವೆ. ಪಂದ್ಯಾಟವು ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಮ್ಯಾಟ್ ಅಂಕಣದ ವ್ಯವಸ್ಥೆ ಮಾಡಲಾಗುವುದು. ವಿಜೇತರಿಗೆ ನಗದು ಸಹಿತ ಟ್ರೋಫಿ ಬಹುಮಾನವಿದೆ ಎಂದು ಅವರು ವಿವರಿಸಿದರು. ಪತ್ರಿಕಾಗೋಷ್ಟಿಯಲ್ಲಿ ದ.ಸಂ.ಸ.ತಾಲೂಕು ಸಂಚಾಲಕ ಅಚ್ಚುತ ಮಲ್ಕಜೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

52 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 hour ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago