ಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

April 22, 2019
4:10 AM

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಎ.21ರಿಂದ ಮೇ.21ರವರೆಗೆ ನಡೆಯಲಿದೆ.
ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಪುತ್ತೂರು ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ | ಮೌನದ ಹಿಂದೆ ಅಡಗಿರುವ ದರ ಚಲನೆಯ ಸಂಕೇತಗಳು
March 22, 2026
6:19 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror