Advertisement

ಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

Share

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಎ.21ರಿಂದ ಮೇ.21ರವರೆಗೆ ನಡೆಯಲಿದೆ.
ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಪುತ್ತೂರು ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

12 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

15 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

16 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

23 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago