ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಎ.21ರಿಂದ ಮೇ.21ರವರೆಗೆ ನಡೆಯಲಿದೆ.
ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಪುತ್ತೂರು ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…