Advertisement

ಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

Share

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಎ.21ರಿಂದ ಮೇ.21ರವರೆಗೆ ನಡೆಯಲಿದೆ.
ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಪುತ್ತೂರು ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

15 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago