ಎ.22 : ಶ್ರೀ ಗುರು ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

April 15, 2019
11:14 AM

ಸುಳ್ಯ: ಇಲ್ಲಿನ ಶ್ರೀ ಗುರು ರಾಘವೇಂದ್ರ ಮಠದ ಪ್ರಥಮ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.22 ರಂದು ವೇದಮೂರ್ತಿ ಹರಿ ಎಳಚಿತ್ತಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.00 ರಿಂದ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಮಧ್ಯಾಹ್ನ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.00 ಗಂಟೆಗೆ ಆಶ್ಲೇಷಾ ಬಲಿ ಪೂಜೆ, ರಂಗಪೂಜೆ ನೆರವೆರಲಿರುವುದು. ಬಳಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಜನೆ ಕಾರ್ಯಕ್ರಮ, ಕುಂಟಾರು ವಾಸುದೇವ ತಂತ್ರಿ ಮತ್ತು ಬಳಗದವರಿಂದ ಭಕ್ತಿಗಾನ ಹಾಗೂ ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ. ಡಾ. ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಉಪ್ಪಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡಾ.ಕಿರಣ್ ಕುಮಾರ್, ಕೃಷ್ಣ ಕಾಮತ್ ಅರಂಬೂರು, ಶ್ರೀಕೃಷ್ಣ ಸೋಮಯಾಗಿ, ಶ್ರೀಧರ ಭಾಗವತ ಹರಿಹರ, ಸುಂದರ ಸರಳಾಯ, ಸುಮಾ ಸುಬ್ಬರಾವ್ ಉಪಸ್ಥಿತರಿರಲಿದ್ದಾರೆ. ಬಳಿಕ ಶಿಕ್ಷಕರ ಯಕ್ಷಗಾನ ಒಕ್ಕೂಟದವರಿಂದ ರತಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಟಿಯಲ್ಲಿ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳಿಕೃಷ್ಣ ಎಂ.ಆರ್., ಟ್ರಸ್ಟಿನ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಟ್ರಸ್ಟಿಗಳಾದ ರಾಮ್ ಕುಮಾರ್, ಅಖಿಲ್ ಸೋಮಯಾಗಿ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror