ಸುಳ್ಯ: ಇಲ್ಲಿನ ಶ್ರೀ ಗುರು ರಾಘವೇಂದ್ರ ಮಠದ ಪ್ರಥಮ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.22 ರಂದು ವೇದಮೂರ್ತಿ ಹರಿ ಎಳಚಿತ್ತಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.00 ರಿಂದ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಮಧ್ಯಾಹ್ನ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.00 ಗಂಟೆಗೆ ಆಶ್ಲೇಷಾ ಬಲಿ ಪೂಜೆ, ರಂಗಪೂಜೆ ನೆರವೆರಲಿರುವುದು. ಬಳಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಜನೆ ಕಾರ್ಯಕ್ರಮ, ಕುಂಟಾರು ವಾಸುದೇವ ತಂತ್ರಿ ಮತ್ತು ಬಳಗದವರಿಂದ ಭಕ್ತಿಗಾನ ಹಾಗೂ ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ. ಡಾ. ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಉಪ್ಪಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡಾ.ಕಿರಣ್ ಕುಮಾರ್, ಕೃಷ್ಣ ಕಾಮತ್ ಅರಂಬೂರು, ಶ್ರೀಕೃಷ್ಣ ಸೋಮಯಾಗಿ, ಶ್ರೀಧರ ಭಾಗವತ ಹರಿಹರ, ಸುಂದರ ಸರಳಾಯ, ಸುಮಾ ಸುಬ್ಬರಾವ್ ಉಪಸ್ಥಿತರಿರಲಿದ್ದಾರೆ. ಬಳಿಕ ಶಿಕ್ಷಕರ ಯಕ್ಷಗಾನ ಒಕ್ಕೂಟದವರಿಂದ ರತಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಟಿಯಲ್ಲಿ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳಿಕೃಷ್ಣ ಎಂ.ಆರ್., ಟ್ರಸ್ಟಿನ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಟ್ರಸ್ಟಿಗಳಾದ ರಾಮ್ ಕುಮಾರ್, ಅಖಿಲ್ ಸೋಮಯಾಗಿ ಉಪಸ್ಥಿತರಿದ್ದರು.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…