ಸುಳ್ಯ: ಇಲ್ಲಿನ ಶ್ರೀ ಗುರು ರಾಘವೇಂದ್ರ ಮಠದ ಪ್ರಥಮ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.22 ರಂದು ವೇದಮೂರ್ತಿ ಹರಿ ಎಳಚಿತ್ತಾಯ ನೇತೃತ್ವದಲ್ಲಿ ನಡೆಯಲಿದೆ ಎಂದು ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.00 ರಿಂದ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಮಧ್ಯಾಹ್ನ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.00 ಗಂಟೆಗೆ ಆಶ್ಲೇಷಾ ಬಲಿ ಪೂಜೆ, ರಂಗಪೂಜೆ ನೆರವೆರಲಿರುವುದು. ಬಳಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಭಜನೆ ಕಾರ್ಯಕ್ರಮ, ಕುಂಟಾರು ವಾಸುದೇವ ತಂತ್ರಿ ಮತ್ತು ಬಳಗದವರಿಂದ ಭಕ್ತಿಗಾನ ಹಾಗೂ ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ. ಡಾ. ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿಲಿದ್ದಾರೆ. ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಉಪ್ಪಳ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡಾ.ಕಿರಣ್ ಕುಮಾರ್, ಕೃಷ್ಣ ಕಾಮತ್ ಅರಂಬೂರು, ಶ್ರೀಕೃಷ್ಣ ಸೋಮಯಾಗಿ, ಶ್ರೀಧರ ಭಾಗವತ ಹರಿಹರ, ಸುಂದರ ಸರಳಾಯ, ಸುಮಾ ಸುಬ್ಬರಾವ್ ಉಪಸ್ಥಿತರಿರಲಿದ್ದಾರೆ. ಬಳಿಕ ಶಿಕ್ಷಕರ ಯಕ್ಷಗಾನ ಒಕ್ಕೂಟದವರಿಂದ ರತಿ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಟಿಯಲ್ಲಿ ಮಠ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಮುರಳಿಕೃಷ್ಣ ಎಂ.ಆರ್., ಟ್ರಸ್ಟಿನ ಕಾರ್ಯದರ್ಶಿ ಗಿರೀಶ್ ಕೇಕುಣ್ಣಾಯ, ಟ್ರಸ್ಟಿಗಳಾದ ರಾಮ್ ಕುಮಾರ್, ಅಖಿಲ್ ಸೋಮಯಾಗಿ ಉಪಸ್ಥಿತರಿದ್ದರು.
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…