Advertisement

ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

Share

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.23ರಿಂದ ಎ.26ರ ವರೆಗೆ ನಡೆಯಲಿದೆ.
ವಿಷು ಸಂಕ್ರಮಣದಂದು ಗೊನೆ ಕಡಿಯುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಎ.23ರಂದು ಸಂಜೆ ಸಂಜೆ 6.30ಕ್ಕೆ ಉಗ್ರಾಣ ತುಂಬಿಸುವುದು, 7ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ 9ರಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಎ.24ರಂದು ಬೆಳಗ್ಗೆ 10ಕ್ಕೆ ನವಕ, ಗಣಪತಿ ಹವನ, ತುಲಾಭಾರ, ಮಹಾಪೂಜೆ ಬಳಿಕ ಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಕಳೇರಿ ಉಳ್ಳಾಕುಲು ಮೂಲಸ್ಥಾನದಿಂದ ದೇವಸ್ಥಾನಕ್ಕೆ ಭಂಡಾರ ಬರಲಿದೆ. ರಾತ್ರಿ 8.30ಕ್ಕೆ ಭೂತಬಲಿ ಉತ್ಸವ, ಬಲಿಕಟ್ಟೆಪೂಜೆ, ವಸಂತೋತ್ಸವ, ಬೆಡಿ ಉತ್ಸವ ಹಾಗೂ ನೃತ್ಯಬಲಿ ಉತ್ಸವ ನಡೆಯಲಿದೆ.
ಎ.25ರಂದು ಬೆಳಗ್ಗೆ 8 ಗಂಟೆಗೆ ದೇವರ ದರ್ಶನ ಬಲಿ ಉತ್ಸವ, ಮಧ್ಯಾಹ್ನ 11 ಗಂಟೆಗೆ ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ದುರ್ಗಾಪೂಜೆ, ರಂಗಪೂಜೆ ನಡೆದ ಬಳಿಕ ರಾತ್ರಿ 9ಕ್ಕೆ ಸಾರ್ವಜನಿಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಎ.26ರಂದು ಅಡ್ಡಣಪೆಟ್ಟು: ಜಾತ್ರೋತ್ಸವ ಪ್ರಯುಕ್ತ ಎ.26ರಂದು ಬೆಳಗ್ಗೆ 9ರಿಂದ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಈ ಸಂದರ್ಭ ಬೆಳಗ್ಗೆ 10.30ಕ್ಕೆ ಐತಿಹಾಸಿಕ ಮಹತ್ವವುಳ್ಳ ಉಳ್ಳಾಕುಲು ದೈವಗಳ ಅಡ್ಡಣಪೆಟ್ಟು ನಡೆಯಲಿದೆ. ಮಧ್ಯಾಹ್ನ 12.30ರಿಂದ ಉದ್ರಾಂಡಿ ಹಾಗೂ ಉಪ ದೈವಗಳ ಕೋಲ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

2 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

7 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago