ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

Share

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.23ರಿಂದ ಎ.26ರ ವರೆಗೆ ನಡೆಯಲಿದೆ.
ವಿಷು ಸಂಕ್ರಮಣದಂದು ಗೊನೆ ಕಡಿಯುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಎ.23ರಂದು ಸಂಜೆ ಸಂಜೆ 6.30ಕ್ಕೆ ಉಗ್ರಾಣ ತುಂಬಿಸುವುದು, 7ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ 9ರಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಎ.24ರಂದು ಬೆಳಗ್ಗೆ 10ಕ್ಕೆ ನವಕ, ಗಣಪತಿ ಹವನ, ತುಲಾಭಾರ, ಮಹಾಪೂಜೆ ಬಳಿಕ ಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಕಳೇರಿ ಉಳ್ಳಾಕುಲು ಮೂಲಸ್ಥಾನದಿಂದ ದೇವಸ್ಥಾನಕ್ಕೆ ಭಂಡಾರ ಬರಲಿದೆ. ರಾತ್ರಿ 8.30ಕ್ಕೆ ಭೂತಬಲಿ ಉತ್ಸವ, ಬಲಿಕಟ್ಟೆಪೂಜೆ, ವಸಂತೋತ್ಸವ, ಬೆಡಿ ಉತ್ಸವ ಹಾಗೂ ನೃತ್ಯಬಲಿ ಉತ್ಸವ ನಡೆಯಲಿದೆ.
ಎ.25ರಂದು ಬೆಳಗ್ಗೆ 8 ಗಂಟೆಗೆ ದೇವರ ದರ್ಶನ ಬಲಿ ಉತ್ಸವ, ಮಧ್ಯಾಹ್ನ 11 ಗಂಟೆಗೆ ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ದುರ್ಗಾಪೂಜೆ, ರಂಗಪೂಜೆ ನಡೆದ ಬಳಿಕ ರಾತ್ರಿ 9ಕ್ಕೆ ಸಾರ್ವಜನಿಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಎ.26ರಂದು ಅಡ್ಡಣಪೆಟ್ಟು: ಜಾತ್ರೋತ್ಸವ ಪ್ರಯುಕ್ತ ಎ.26ರಂದು ಬೆಳಗ್ಗೆ 9ರಿಂದ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಈ ಸಂದರ್ಭ ಬೆಳಗ್ಗೆ 10.30ಕ್ಕೆ ಐತಿಹಾಸಿಕ ಮಹತ್ವವುಳ್ಳ ಉಳ್ಳಾಕುಲು ದೈವಗಳ ಅಡ್ಡಣಪೆಟ್ಟು ನಡೆಯಲಿದೆ. ಮಧ್ಯಾಹ್ನ 12.30ರಿಂದ ಉದ್ರಾಂಡಿ ಹಾಗೂ ಉಪ ದೈವಗಳ ಕೋಲ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಏಪ್ರಿಲ್‌ನಲ್ಲಿ ಶನಿ ತನ್ನದೇ ನಕ್ಷತ್ರದಲ್ಲಿ (ಕನ್ಯಾ ರಾಶಿ) ಪ್ರವೇಶ | 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 minutes ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

9 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

9 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

24 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

24 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

1 day ago