Advertisement

ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

Share

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.23ರಿಂದ ಎ.26ರ ವರೆಗೆ ನಡೆಯಲಿದೆ.
ವಿಷು ಸಂಕ್ರಮಣದಂದು ಗೊನೆ ಕಡಿಯುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಎ.23ರಂದು ಸಂಜೆ ಸಂಜೆ 6.30ಕ್ಕೆ ಉಗ್ರಾಣ ತುಂಬಿಸುವುದು, 7ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ 9ರಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಎ.24ರಂದು ಬೆಳಗ್ಗೆ 10ಕ್ಕೆ ನವಕ, ಗಣಪತಿ ಹವನ, ತುಲಾಭಾರ, ಮಹಾಪೂಜೆ ಬಳಿಕ ಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಕಳೇರಿ ಉಳ್ಳಾಕುಲು ಮೂಲಸ್ಥಾನದಿಂದ ದೇವಸ್ಥಾನಕ್ಕೆ ಭಂಡಾರ ಬರಲಿದೆ. ರಾತ್ರಿ 8.30ಕ್ಕೆ ಭೂತಬಲಿ ಉತ್ಸವ, ಬಲಿಕಟ್ಟೆಪೂಜೆ, ವಸಂತೋತ್ಸವ, ಬೆಡಿ ಉತ್ಸವ ಹಾಗೂ ನೃತ್ಯಬಲಿ ಉತ್ಸವ ನಡೆಯಲಿದೆ.
ಎ.25ರಂದು ಬೆಳಗ್ಗೆ 8 ಗಂಟೆಗೆ ದೇವರ ದರ್ಶನ ಬಲಿ ಉತ್ಸವ, ಮಧ್ಯಾಹ್ನ 11 ಗಂಟೆಗೆ ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ದುರ್ಗಾಪೂಜೆ, ರಂಗಪೂಜೆ ನಡೆದ ಬಳಿಕ ರಾತ್ರಿ 9ಕ್ಕೆ ಸಾರ್ವಜನಿಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಎ.26ರಂದು ಅಡ್ಡಣಪೆಟ್ಟು: ಜಾತ್ರೋತ್ಸವ ಪ್ರಯುಕ್ತ ಎ.26ರಂದು ಬೆಳಗ್ಗೆ 9ರಿಂದ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಈ ಸಂದರ್ಭ ಬೆಳಗ್ಗೆ 10.30ಕ್ಕೆ ಐತಿಹಾಸಿಕ ಮಹತ್ವವುಳ್ಳ ಉಳ್ಳಾಕುಲು ದೈವಗಳ ಅಡ್ಡಣಪೆಟ್ಟು ನಡೆಯಲಿದೆ. ಮಧ್ಯಾಹ್ನ 12.30ರಿಂದ ಉದ್ರಾಂಡಿ ಹಾಗೂ ಉಪ ದೈವಗಳ ಕೋಲ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

4 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

11 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

11 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

20 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

21 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago