Advertisement

ಎ.23 ರಿಂದ ಮಂಡೆಕೋಲು ದೇವಸ್ಥಾನ ಜಾತ್ರೋತ್ಸವ

Share

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.23ರಿಂದ ಎ.26ರ ವರೆಗೆ ನಡೆಯಲಿದೆ.
ವಿಷು ಸಂಕ್ರಮಣದಂದು ಗೊನೆ ಕಡಿಯುವುದರೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಎ.23ರಂದು ಸಂಜೆ ಸಂಜೆ 6.30ಕ್ಕೆ ಉಗ್ರಾಣ ತುಂಬಿಸುವುದು, 7ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ 9ರಿಂದ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಎ.24ರಂದು ಬೆಳಗ್ಗೆ 10ಕ್ಕೆ ನವಕ, ಗಣಪತಿ ಹವನ, ತುಲಾಭಾರ, ಮಹಾಪೂಜೆ ಬಳಿಕ ಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಕಳೇರಿ ಉಳ್ಳಾಕುಲು ಮೂಲಸ್ಥಾನದಿಂದ ದೇವಸ್ಥಾನಕ್ಕೆ ಭಂಡಾರ ಬರಲಿದೆ. ರಾತ್ರಿ 8.30ಕ್ಕೆ ಭೂತಬಲಿ ಉತ್ಸವ, ಬಲಿಕಟ್ಟೆಪೂಜೆ, ವಸಂತೋತ್ಸವ, ಬೆಡಿ ಉತ್ಸವ ಹಾಗೂ ನೃತ್ಯಬಲಿ ಉತ್ಸವ ನಡೆಯಲಿದೆ.
ಎ.25ರಂದು ಬೆಳಗ್ಗೆ 8 ಗಂಟೆಗೆ ದೇವರ ದರ್ಶನ ಬಲಿ ಉತ್ಸವ, ಮಧ್ಯಾಹ್ನ 11 ಗಂಟೆಗೆ ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ಮಹಾಪೂಜೆ ನಡೆದ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ದುರ್ಗಾಪೂಜೆ, ರಂಗಪೂಜೆ ನಡೆದ ಬಳಿಕ ರಾತ್ರಿ 9ಕ್ಕೆ ಸಾರ್ವಜನಿಕರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.

ಎ.26ರಂದು ಅಡ್ಡಣಪೆಟ್ಟು: ಜಾತ್ರೋತ್ಸವ ಪ್ರಯುಕ್ತ ಎ.26ರಂದು ಬೆಳಗ್ಗೆ 9ರಿಂದ ಉಳ್ಳಾಕುಲು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಈ ಸಂದರ್ಭ ಬೆಳಗ್ಗೆ 10.30ಕ್ಕೆ ಐತಿಹಾಸಿಕ ಮಹತ್ವವುಳ್ಳ ಉಳ್ಳಾಕುಲು ದೈವಗಳ ಅಡ್ಡಣಪೆಟ್ಟು ನಡೆಯಲಿದೆ. ಮಧ್ಯಾಹ್ನ 12.30ರಿಂದ ಉದ್ರಾಂಡಿ ಹಾಗೂ ಉಪ ದೈವಗಳ ಕೋಲ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

6 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

15 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago