ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು ಯುವಬ್ರಿಗೇಡ್ ಪ್ರಕಟಣೆ ತಿಳಿಸಿದೆ.
ಯುವಬ್ರಿಗೇಡ್ ಪರಿಸರ ಸಂರಕ್ಷಣೆಯ ಅನೇಕ ಕಾರ್ಯಕ್ರಮಗಳನ್ನು ಈ ಹಿಂದೆ ಮಾಡಿದೆ. ಕಳೆದ ವರ್ಷ ಕಾವೇರಿ ನದಿಯನ್ನು ಮೊದಲ್ಗೊಂಡು ರಾಜ್ಯಾದ್ಯಂತ 7 ದಿನಗಳ ಕಾಲ ನದಿ ಸ್ವಚ್ಛತಾ ಕಾರ್ಯ ನಡೆಸಿತ್ತು. ನಮ್ಮೆಲ್ಲರ ಪಾಪ ಕಳೆಯುವ ನದಿ ಇಂದು ಮಲಿನವಾಗಿದೆ. ನದಿಗಳಲ್ಲಿ ಟನ್ಗಟ್ಟಲೆ ತ್ಯಾಜ್ಯಗಳು ಸಿಗುತ್ತಿವೆ.
ಈ ಬಾರಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡಲಿದೆ.ಸರ್ಪ ದೋಷ ನಿವಾರಣೆಗೆ ಸರ್ಪಸಂಸ್ಕಾರ ಮಾಡುವಂತೆ ನದಿ ಹಾಳು ಮಾಡಿರುವುದಕ್ಕೆ ಕುಮಾರ ಸಂಸ್ಕಾರ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಯುವಬ್ರಿಗೇಡ್ ಮಾರ್ಗದರ್ಶನ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…