ಸುಳ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯನ್ನು ಸ್ವಚ್ಛತಾ ಕಾರ್ಯವನ್ನು #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಎ.27 ಹಾಗೂ 28 ರಂದು ನಡೆಯಲಿದೆ ಎಂದು ಯುವಬ್ರಿಗೇಡ್ ಪ್ರಕಟಣೆ ತಿಳಿಸಿದೆ.
ಯುವಬ್ರಿಗೇಡ್ ಪರಿಸರ ಸಂರಕ್ಷಣೆಯ ಅನೇಕ ಕಾರ್ಯಕ್ರಮಗಳನ್ನು ಈ ಹಿಂದೆ ಮಾಡಿದೆ. ಕಳೆದ ವರ್ಷ ಕಾವೇರಿ ನದಿಯನ್ನು ಮೊದಲ್ಗೊಂಡು ರಾಜ್ಯಾದ್ಯಂತ 7 ದಿನಗಳ ಕಾಲ ನದಿ ಸ್ವಚ್ಛತಾ ಕಾರ್ಯ ನಡೆಸಿತ್ತು. ನಮ್ಮೆಲ್ಲರ ಪಾಪ ಕಳೆಯುವ ನದಿ ಇಂದು ಮಲಿನವಾಗಿದೆ. ನದಿಗಳಲ್ಲಿ ಟನ್ಗಟ್ಟಲೆ ತ್ಯಾಜ್ಯಗಳು ಸಿಗುತ್ತಿವೆ.
ಈ ಬಾರಿ ಕುಮಾರಧಾರಾ ನದಿ ಸ್ವಚ್ಛತಾ ಕಾರ್ಯವನ್ನು ಯುವಬ್ರಿಗೇಡ್ ಮಾಡಲಿದೆ.ಸರ್ಪ ದೋಷ ನಿವಾರಣೆಗೆ ಸರ್ಪಸಂಸ್ಕಾರ ಮಾಡುವಂತೆ ನದಿ ಹಾಳು ಮಾಡಿರುವುದಕ್ಕೆ ಕುಮಾರ ಸಂಸ್ಕಾರ ಎಂಬ ಹೆಸರಿನಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ. ಯುವಬ್ರಿಗೇಡ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು, ವಿದ್ಯಾರ್ಥಿಗಳು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಯುವಬ್ರಿಗೇಡ್ ಮಾರ್ಗದರ್ಶನ ಚಕ್ರವರ್ತಿ ಸೂಲಿಬೆಲೆ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…