Advertisement
ಧಾರ್ಮಿಕ

ಎ 29 ರಿಂದ ಅಗಳಿ ಶ್ರೀ ಸದಾಶಿವ ದೇವರ ಜಾತ್ರೋತ್ಸವ

Share

ಕಾಣಿಯೂರು: ಕಾೈಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ 29, 30ರಂದು ನಡೆಯಲಿದೆ.

ಎ 29ರಂದು ಬೆಳಿಗ್ಗೆ ತೋರಣ ಮುಹೂರ್ತ, ಹಸಿರು ಹೊರೆಕಾಣಿಕೆ ಸಮರ್ಪಣೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ತಂತ್ರಿಗಳ ಆಗಮನ, ರಾತ್ರಿ ಪ್ರಾರ್ಥನೆ, ವಾಸ್ತು ರಕ್ಷೋಘ್ನ ಹೋಮ, ವಾಸ್ತುಬಲಿ, ವಾಸ್ತು ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಕಾೈಮಣ ಮತ್ತು ಬೆಳಂದೂರು ಅಂಗನವಾಡಿ ಪುಟಾಣೆಗಳಿಂದ ವಿವಿಧ ನೃತ್ಯ ನಡೆಯಲಿದೆ. ಬಳಿಕ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಇವರ ಸಂಯೋಜನೆಯಲ್ಲಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಪೌರಾಣಿಕ ಯಕ್ಷಗಾನ “ಶಿವಭಕ್ತ ವೀರಮಣಿ- ಗರುಡ ಗರ್ವಭಂಗ ” ನಡೆಯಲಿದೆ.

ಎ 30ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಶ್ರೀ ದೇವರಿಗೆ ಪುಷ್ಪಕನ್ನಡಿ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆದ, ಬಳಿಕ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮಯ್ಯ ಗೌಡ ಕರಂದ್ಲಾಜೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago