ಕಾಣಿಯೂರು: ಕಾೈಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ 29, 30ರಂದು ನಡೆಯಲಿದೆ.
ಎ 29ರಂದು ಬೆಳಿಗ್ಗೆ ತೋರಣ ಮುಹೂರ್ತ, ಹಸಿರು ಹೊರೆಕಾಣಿಕೆ ಸಮರ್ಪಣೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ತಂತ್ರಿಗಳ ಆಗಮನ, ರಾತ್ರಿ ಪ್ರಾರ್ಥನೆ, ವಾಸ್ತು ರಕ್ಷೋಘ್ನ ಹೋಮ, ವಾಸ್ತುಬಲಿ, ವಾಸ್ತು ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಕಾೈಮಣ ಮತ್ತು ಬೆಳಂದೂರು ಅಂಗನವಾಡಿ ಪುಟಾಣೆಗಳಿಂದ ವಿವಿಧ ನೃತ್ಯ ನಡೆಯಲಿದೆ. ಬಳಿಕ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಇವರ ಸಂಯೋಜನೆಯಲ್ಲಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಪೌರಾಣಿಕ ಯಕ್ಷಗಾನ “ಶಿವಭಕ್ತ ವೀರಮಣಿ- ಗರುಡ ಗರ್ವಭಂಗ ” ನಡೆಯಲಿದೆ.
ಎ 30ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಶ್ರೀ ದೇವರಿಗೆ ಪುಷ್ಪಕನ್ನಡಿ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆದ, ಬಳಿಕ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮಯ್ಯ ಗೌಡ ಕರಂದ್ಲಾಜೆ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…