Advertisement
Share

ಏಕಾಂತವೆಂಬುದು ಸುಂದರ  ಅನುಭವ. ಬೇಕೆಂದಾಗ ಸಿಗದು, ಸಿಕ್ಕಿದಾಗ ಬಿಡಲಾಗದು.  ಅಲ್ಲಿ ಮನಸು ಮಾತನಾಡುತ್ತದೆ. ಪ್ರಶ್ನೆಗಳು ಹುಟ್ಟುತ್ತವೆ, ಉತ್ತರಕ್ಕಾಗಿ ಹುಡುಕಾಟ ನಡೆಯುತ್ತದೆ, ಸರಿಯೋ  ತಪ್ಪೋ ಮತ್ತೆ ಮತ್ತೆ ವಿಮರ್ಶೆಗಳು ನಡೆಯುತ್ತವೆ. ಉತ್ತರ ಕೆಲವೊಮ್ಮೆಮನಸ್ಸಿಗೆ ಹಿತವಾಗಿಯೂ ಇರಬಹುದು, ಕಹಿಯೂ ಆಗಬಹುದು. ಆದರೆ ಅಲ್ಲಿ ಯಾವ ಒತ್ತಡವೂ ಇಲ್ಲ, ಯಾರ ಹಿಡಿತವೂ ಇರುವುದಿಲ್ಲ, ಅವರವರವರ ಮನಸ್ಸಿನ ಮಾತುಗಳಷ್ಟೇ. ಮನಸಿನ ನೋವು ಬೇಸರಿಕೆಗಳು ಹೊರ ಹೊಮ್ಮುವುದಕೆ  ಏಕಾಂತ ಕ್ಷಣಗಳು ಸಾಕ್ಷಿ.

Advertisement
Advertisement
ಏಕಾಂತವಿರುವುದು  ಮನಸ್ಸಿನಲ್ಲಿ. ಜೊತೆಗೆ ಯಾರು ಇಲ್ಲದೆ ಒಬ್ಬರೇ ಇದ್ದರೂ ಏಕಾಂತವಿರಬೇಕೆಂದೇನೂ ಇಲ್ಲ. ಹತ್ತು ಹಲವು ಯೋಚನೆಗಳು,  ಯೋಜನೆಗ ಳು, ಕೆಲಸಗಳು ಮುತ್ತಿಕೊಂಡು  ನಮ್ಮನ್ನು ಕಾರ್ಯ ಪ್ರವೃತ್ತರಾಗುವಂತೆ ಮಾಡುತ್ತವೆ.  ಕೆಲವೊಮ್ಮೆ ಜನ ಜಾತ್ರೆಯಲ್ಲಿ ದ್ದರೂ ಆರಾಮವಾಗಿ  ,ಇರುವ ಸ್ವಲ್ಪ ವೇ ಜಾಗದಲ್ಲಿ ಸುಖ ನಿದ್ದೆ ಯನ್ನು ಮಾಡಿಬಿಡು ತ್ತಾರೆ.  ನಾಳಿನ ಚಿಂತೆ ಇದ್ದರೂ ಅದು ಅವರ ನಿತ್ಯ ಕರ್ಮಕ್ಕೆ ಯಾವತ್ತೂ ಅಡ್ಡಿಯಾಗಲಾರದು. ಎಷ್ಟೇ ಬ್ಯುಸಿ  ಇದ್ದರೂ ಸ್ವಂತ ಕಾರ್ಯಕ್ರಮ ಗಳಿಗೆ ಸಮಯ ಹೊಂದಿಸಿಕೊಳ್ಳುತ್ತಾರೆ. ಒಂದಿಷ್ಟು ಹೊತ್ತು ತಮಗಾಗಿ ಮೀಸಲಿಟ್ಟು ಕೊಳ್ಳುವಷ್ಟು ಸ್ವಾತಂತ್ರ್ಯ ಉಳಿಸಿಕೊಂಡಿರುತ್ತಾರೆ. ಅದು ಅವರವರ ಸ್ವಭಾವ.
ಇಂದು ಏಕಾಂತ ಬೇಕು ಎನ್ನುವರು ಮೊದಲು ಮೊಬೈಲ್ ನ್ನು ಸ್ವಿಚ್ ಆಫ್ ಮಾಡಬೇಕು.   ನಮ್ಮ ಪ್ರತಿ ಕ್ಷಣವನ್ನು ಮೊಬೈಲ್ ಆಕ್ರಮಿಸಿ ಕೊಳ್ಳುತ್ತಿದೆ. ಆಟ, ಊಟ, ಪಾಠ ಯಾವುದನ್ನೂ ಮಾಡಬೇಕಾ ದಾ ಸಮಯಕ್ಕೆ ಮಾಡಲೂ ಬಿಡದೆ ಸತಾಯಿಸುವ ಮೊಬೈಲ್ ನಮ್ಮನ್ನು ಅದರ ಗುಲಾಮರನ್ನಾಗಿ ಮಾಡುತ್ತಿದೆ.  ಒಂದರೇ ಕ್ಷಣ ಮಲಗುವ ಎಂದರೆ ಬೇಕೊ ಬೇಡವೋ ಯಾವುದೋ ಮೆಸೇಜ್ ‌ಬಂದು ಬಿದ್ದ ಸೂಚನೆಯಾಗುತ್ತದೆ. ಅಗತ್ಯ ವುಂಟೋ ಇಲ್ಲವೋ ಬಂದ ಎಲ್ಲವನ್ನೂ ( ಗುಂಪಿನಲ್ಲಿ ಬಂದದ್ದೂ ಆಗಿರಬಹುದು) ಓದಲೇ ಬೇಕು ಎಂಬ ಭಾವನೆ!
ಲೇಖಕರು ತಮ್ಮ ಮುಖ್ಯ ಕಥೆ , ಕಾದಂಬರಿ , ಆತ್ಮಕಥೆಗಳನ್ನು ಬರೆಯುವ ಸಂಧರ್ಭದಲ್ಲಿ ದೂರದ ಊರುಗಳನ್ನು ಅರಸಿ ಹೋಗುತ್ತಿದ್ದರಂತೆ. ತಮ್ಮ ಬರಹಗಳಿಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗಬಾರದು ಎಂಬ ಮುಂದಾಲೋಚನೆ ಅವರದಾಗಿರುತ್ತಿತ್ತು. ಶಿವರಾಮ ಕಾರಂತರು ತಮ್ಮ ‘ಬೆಟ್ಟದ ಜೀವ ‘ ಕಾದಂಬರಿ ಯನ್ನು ನಮ್ಮ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ದ ಪಕ್ಕದ  ಕಡಮ್ಮಕಲ್ಲು ಕಟ್ಟದ  ಕಟ್ಟ ಗೋವಿಂದಯ್ಯ ನವರ ಮನೆಯಲ್ಲಿದ್ದು ಬರೆದರಂತೆ.  ಪ್ರಕೃತಿಯ ಮಡಿಲಲ್ಲಿ ಸುಂದರ ಕೃತಿಯೊಂದು ರಚನೆಯಾಯಿತು.
ಏಕಾಂತ ವೆಂದರೆ ಒಂಟಿತನವಲ್ಲ, ಏಕಾಂತವೆಂದರೆ ವೈರಾಗ್ಯ ವಲ್ಲ. , ಏಕಾಂತವೆಂಬುದು ಒಂದು ಸುಂದರ ಅನುಭವ . ಅನುಭವಿಸುವ ಮನಸ್ಸು ಬೇಕಷ್ಟೇ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

15 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

15 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago