Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏಕಾಂತವೆಂಬುದು ಸುಂದರ  ಅನುಭವ. ಬೇಕೆಂದಾಗ ಸಿಗದು, ಸಿಕ್ಕಿದಾಗ ಬಿಡಲಾಗದು.  ಅಲ್ಲಿ ಮನಸು ಮಾತನಾಡುತ್ತದೆ. ಪ್ರಶ್ನೆಗಳು ಹುಟ್ಟುತ್ತವೆ, ಉತ್ತರಕ್ಕಾಗಿ ಹುಡುಕಾಟ ನಡೆಯುತ್ತದೆ, ಸರಿಯೋ  ತಪ್ಪೋ ಮತ್ತೆ ಮತ್ತೆ ವಿಮರ್ಶೆಗಳು ನಡೆಯುತ್ತವೆ. ಉತ್ತರ ಕೆಲವೊಮ್ಮೆಮನಸ್ಸಿಗೆ ಹಿತವಾಗಿಯೂ ಇರಬಹುದು, ಕಹಿಯೂ ಆಗಬಹುದು. ಆದರೆ ಅಲ್ಲಿ ಯಾವ ಒತ್ತಡವೂ ಇಲ್ಲ, ಯಾರ ಹಿಡಿತವೂ ಇರುವುದಿಲ್ಲ, ಅವರವರವರ ಮನಸ್ಸಿನ ಮಾತುಗಳಷ್ಟೇ. ಮನಸಿನ ನೋವು ಬೇಸರಿಕೆಗಳು ಹೊರ ಹೊಮ್ಮುವುದಕೆ  ಏಕಾಂತ ಕ್ಷಣಗಳು ಸಾಕ್ಷಿ.

Advertisement
ಏಕಾಂತವಿರುವುದು  ಮನಸ್ಸಿನಲ್ಲಿ. ಜೊತೆಗೆ ಯಾರು ಇಲ್ಲದೆ ಒಬ್ಬರೇ ಇದ್ದರೂ ಏಕಾಂತವಿರಬೇಕೆಂದೇನೂ ಇಲ್ಲ. ಹತ್ತು ಹಲವು ಯೋಚನೆಗಳು,  ಯೋಜನೆಗ ಳು, ಕೆಲಸಗಳು ಮುತ್ತಿಕೊಂಡು  ನಮ್ಮನ್ನು ಕಾರ್ಯ ಪ್ರವೃತ್ತರಾಗುವಂತೆ ಮಾಡುತ್ತವೆ.  ಕೆಲವೊಮ್ಮೆ ಜನ ಜಾತ್ರೆಯಲ್ಲಿ ದ್ದರೂ ಆರಾಮವಾಗಿ  ,ಇರುವ ಸ್ವಲ್ಪ ವೇ ಜಾಗದಲ್ಲಿ ಸುಖ ನಿದ್ದೆ ಯನ್ನು ಮಾಡಿಬಿಡು ತ್ತಾರೆ.  ನಾಳಿನ ಚಿಂತೆ ಇದ್ದರೂ ಅದು ಅವರ ನಿತ್ಯ ಕರ್ಮಕ್ಕೆ ಯಾವತ್ತೂ ಅಡ್ಡಿಯಾಗಲಾರದು. ಎಷ್ಟೇ ಬ್ಯುಸಿ  ಇದ್ದರೂ ಸ್ವಂತ ಕಾರ್ಯಕ್ರಮ ಗಳಿಗೆ ಸಮಯ ಹೊಂದಿಸಿಕೊಳ್ಳುತ್ತಾರೆ. ಒಂದಿಷ್ಟು ಹೊತ್ತು ತಮಗಾಗಿ ಮೀಸಲಿಟ್ಟು ಕೊಳ್ಳುವಷ್ಟು ಸ್ವಾತಂತ್ರ್ಯ ಉಳಿಸಿಕೊಂಡಿರುತ್ತಾರೆ. ಅದು ಅವರವರ ಸ್ವಭಾವ.
ಇಂದು ಏಕಾಂತ ಬೇಕು ಎನ್ನುವರು ಮೊದಲು ಮೊಬೈಲ್ ನ್ನು ಸ್ವಿಚ್ ಆಫ್ ಮಾಡಬೇಕು.   ನಮ್ಮ ಪ್ರತಿ ಕ್ಷಣವನ್ನು ಮೊಬೈಲ್ ಆಕ್ರಮಿಸಿ ಕೊಳ್ಳುತ್ತಿದೆ. ಆಟ, ಊಟ, ಪಾಠ ಯಾವುದನ್ನೂ ಮಾಡಬೇಕಾ ದಾ ಸಮಯಕ್ಕೆ ಮಾಡಲೂ ಬಿಡದೆ ಸತಾಯಿಸುವ ಮೊಬೈಲ್ ನಮ್ಮನ್ನು ಅದರ ಗುಲಾಮರನ್ನಾಗಿ ಮಾಡುತ್ತಿದೆ.  ಒಂದರೇ ಕ್ಷಣ ಮಲಗುವ ಎಂದರೆ ಬೇಕೊ ಬೇಡವೋ ಯಾವುದೋ ಮೆಸೇಜ್ ‌ಬಂದು ಬಿದ್ದ ಸೂಚನೆಯಾಗುತ್ತದೆ. ಅಗತ್ಯ ವುಂಟೋ ಇಲ್ಲವೋ ಬಂದ ಎಲ್ಲವನ್ನೂ ( ಗುಂಪಿನಲ್ಲಿ ಬಂದದ್ದೂ ಆಗಿರಬಹುದು) ಓದಲೇ ಬೇಕು ಎಂಬ ಭಾವನೆ!
ಲೇಖಕರು ತಮ್ಮ ಮುಖ್ಯ ಕಥೆ , ಕಾದಂಬರಿ , ಆತ್ಮಕಥೆಗಳನ್ನು ಬರೆಯುವ ಸಂಧರ್ಭದಲ್ಲಿ ದೂರದ ಊರುಗಳನ್ನು ಅರಸಿ ಹೋಗುತ್ತಿದ್ದರಂತೆ. ತಮ್ಮ ಬರಹಗಳಿಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗಬಾರದು ಎಂಬ ಮುಂದಾಲೋಚನೆ ಅವರದಾಗಿರುತ್ತಿತ್ತು. ಶಿವರಾಮ ಕಾರಂತರು ತಮ್ಮ ‘ಬೆಟ್ಟದ ಜೀವ ‘ ಕಾದಂಬರಿ ಯನ್ನು ನಮ್ಮ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ದ ಪಕ್ಕದ  ಕಡಮ್ಮಕಲ್ಲು ಕಟ್ಟದ  ಕಟ್ಟ ಗೋವಿಂದಯ್ಯ ನವರ ಮನೆಯಲ್ಲಿದ್ದು ಬರೆದರಂತೆ.  ಪ್ರಕೃತಿಯ ಮಡಿಲಲ್ಲಿ ಸುಂದರ ಕೃತಿಯೊಂದು ರಚನೆಯಾಯಿತು.
ಏಕಾಂತ ವೆಂದರೆ ಒಂಟಿತನವಲ್ಲ, ಏಕಾಂತವೆಂದರೆ ವೈರಾಗ್ಯ ವಲ್ಲ. , ಏಕಾಂತವೆಂಬುದು ಒಂದು ಸುಂದರ ಅನುಭವ . ಅನುಭವಿಸುವ ಮನಸ್ಸು ಬೇಕಷ್ಟೇ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

3 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

6 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

12 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

12 hours ago