Advertisement
Share

ಏಕಾಂತವೆಂಬುದು ಸುಂದರ  ಅನುಭವ. ಬೇಕೆಂದಾಗ ಸಿಗದು, ಸಿಕ್ಕಿದಾಗ ಬಿಡಲಾಗದು.  ಅಲ್ಲಿ ಮನಸು ಮಾತನಾಡುತ್ತದೆ. ಪ್ರಶ್ನೆಗಳು ಹುಟ್ಟುತ್ತವೆ, ಉತ್ತರಕ್ಕಾಗಿ ಹುಡುಕಾಟ ನಡೆಯುತ್ತದೆ, ಸರಿಯೋ  ತಪ್ಪೋ ಮತ್ತೆ ಮತ್ತೆ ವಿಮರ್ಶೆಗಳು ನಡೆಯುತ್ತವೆ. ಉತ್ತರ ಕೆಲವೊಮ್ಮೆಮನಸ್ಸಿಗೆ ಹಿತವಾಗಿಯೂ ಇರಬಹುದು, ಕಹಿಯೂ ಆಗಬಹುದು. ಆದರೆ ಅಲ್ಲಿ ಯಾವ ಒತ್ತಡವೂ ಇಲ್ಲ, ಯಾರ ಹಿಡಿತವೂ ಇರುವುದಿಲ್ಲ, ಅವರವರವರ ಮನಸ್ಸಿನ ಮಾತುಗಳಷ್ಟೇ. ಮನಸಿನ ನೋವು ಬೇಸರಿಕೆಗಳು ಹೊರ ಹೊಮ್ಮುವುದಕೆ  ಏಕಾಂತ ಕ್ಷಣಗಳು ಸಾಕ್ಷಿ.

ಏಕಾಂತವಿರುವುದು  ಮನಸ್ಸಿನಲ್ಲಿ. ಜೊತೆಗೆ ಯಾರು ಇಲ್ಲದೆ ಒಬ್ಬರೇ ಇದ್ದರೂ ಏಕಾಂತವಿರಬೇಕೆಂದೇನೂ ಇಲ್ಲ. ಹತ್ತು ಹಲವು ಯೋಚನೆಗಳು,  ಯೋಜನೆಗ ಳು, ಕೆಲಸಗಳು ಮುತ್ತಿಕೊಂಡು  ನಮ್ಮನ್ನು ಕಾರ್ಯ ಪ್ರವೃತ್ತರಾಗುವಂತೆ ಮಾಡುತ್ತವೆ.  ಕೆಲವೊಮ್ಮೆ ಜನ ಜಾತ್ರೆಯಲ್ಲಿ ದ್ದರೂ ಆರಾಮವಾಗಿ  ,ಇರುವ ಸ್ವಲ್ಪ ವೇ ಜಾಗದಲ್ಲಿ ಸುಖ ನಿದ್ದೆ ಯನ್ನು ಮಾಡಿಬಿಡು ತ್ತಾರೆ.  ನಾಳಿನ ಚಿಂತೆ ಇದ್ದರೂ ಅದು ಅವರ ನಿತ್ಯ ಕರ್ಮಕ್ಕೆ ಯಾವತ್ತೂ ಅಡ್ಡಿಯಾಗಲಾರದು. ಎಷ್ಟೇ ಬ್ಯುಸಿ  ಇದ್ದರೂ ಸ್ವಂತ ಕಾರ್ಯಕ್ರಮ ಗಳಿಗೆ ಸಮಯ ಹೊಂದಿಸಿಕೊಳ್ಳುತ್ತಾರೆ. ಒಂದಿಷ್ಟು ಹೊತ್ತು ತಮಗಾಗಿ ಮೀಸಲಿಟ್ಟು ಕೊಳ್ಳುವಷ್ಟು ಸ್ವಾತಂತ್ರ್ಯ ಉಳಿಸಿಕೊಂಡಿರುತ್ತಾರೆ. ಅದು ಅವರವರ ಸ್ವಭಾವ.
ಇಂದು ಏಕಾಂತ ಬೇಕು ಎನ್ನುವರು ಮೊದಲು ಮೊಬೈಲ್ ನ್ನು ಸ್ವಿಚ್ ಆಫ್ ಮಾಡಬೇಕು.   ನಮ್ಮ ಪ್ರತಿ ಕ್ಷಣವನ್ನು ಮೊಬೈಲ್ ಆಕ್ರಮಿಸಿ ಕೊಳ್ಳುತ್ತಿದೆ. ಆಟ, ಊಟ, ಪಾಠ ಯಾವುದನ್ನೂ ಮಾಡಬೇಕಾ ದಾ ಸಮಯಕ್ಕೆ ಮಾಡಲೂ ಬಿಡದೆ ಸತಾಯಿಸುವ ಮೊಬೈಲ್ ನಮ್ಮನ್ನು ಅದರ ಗುಲಾಮರನ್ನಾಗಿ ಮಾಡುತ್ತಿದೆ.  ಒಂದರೇ ಕ್ಷಣ ಮಲಗುವ ಎಂದರೆ ಬೇಕೊ ಬೇಡವೋ ಯಾವುದೋ ಮೆಸೇಜ್ ‌ಬಂದು ಬಿದ್ದ ಸೂಚನೆಯಾಗುತ್ತದೆ. ಅಗತ್ಯ ವುಂಟೋ ಇಲ್ಲವೋ ಬಂದ ಎಲ್ಲವನ್ನೂ ( ಗುಂಪಿನಲ್ಲಿ ಬಂದದ್ದೂ ಆಗಿರಬಹುದು) ಓದಲೇ ಬೇಕು ಎಂಬ ಭಾವನೆ!
ಲೇಖಕರು ತಮ್ಮ ಮುಖ್ಯ ಕಥೆ , ಕಾದಂಬರಿ , ಆತ್ಮಕಥೆಗಳನ್ನು ಬರೆಯುವ ಸಂಧರ್ಭದಲ್ಲಿ ದೂರದ ಊರುಗಳನ್ನು ಅರಸಿ ಹೋಗುತ್ತಿದ್ದರಂತೆ. ತಮ್ಮ ಬರಹಗಳಿಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗಬಾರದು ಎಂಬ ಮುಂದಾಲೋಚನೆ ಅವರದಾಗಿರುತ್ತಿತ್ತು. ಶಿವರಾಮ ಕಾರಂತರು ತಮ್ಮ ‘ಬೆಟ್ಟದ ಜೀವ ‘ ಕಾದಂಬರಿ ಯನ್ನು ನಮ್ಮ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ದ ಪಕ್ಕದ  ಕಡಮ್ಮಕಲ್ಲು ಕಟ್ಟದ  ಕಟ್ಟ ಗೋವಿಂದಯ್ಯ ನವರ ಮನೆಯಲ್ಲಿದ್ದು ಬರೆದರಂತೆ.  ಪ್ರಕೃತಿಯ ಮಡಿಲಲ್ಲಿ ಸುಂದರ ಕೃತಿಯೊಂದು ರಚನೆಯಾಯಿತು.
ಏಕಾಂತ ವೆಂದರೆ ಒಂಟಿತನವಲ್ಲ, ಏಕಾಂತವೆಂದರೆ ವೈರಾಗ್ಯ ವಲ್ಲ. , ಏಕಾಂತವೆಂಬುದು ಒಂದು ಸುಂದರ ಅನುಭವ . ಅನುಭವಿಸುವ ಮನಸ್ಸು ಬೇಕಷ್ಟೇ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

21 minutes ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

35 minutes ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

58 minutes ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

1 hour ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

10 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

12 hours ago