Advertisement
ಸುದ್ದಿಗಳು

ಏನೆಕಲ್ಲಿನಲ್ಲಿ ನ್ಯಾಯಕ್ಕಾಗಿ ಏಕಾಂಗಿ ಪ್ರತಿಭಟನೆ….!

Share

ಏನೆಕಲ್ಲು : ಏನೆಕಲ್ಲು ಗ್ರಾಮದ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಿಂದ ಅನ್ಯಾಯ ನಡೆದಿದೆ ಎಂದು ಆರೋಪಿಸಿ  ಏಕಾಂಗಿಯಾಗಿ ಸಹಕಾರಿ ಸಂಘದ ಬಳಿ ಶೆಡ್ ನಿರ್ಮಿಸಿ 3 ದಿನಗಳಿಂದ ಸತ್ಯಾಗ್ರಹ ನಡೆಸಿ ಗುರುವಾರ ಸಂಜೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಘಟನೆ ನಡೆದಿದೆ.

ನ್ಯಾಯಕ್ಕಾಗಿ 3 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದವರು  ಏನೆಕಲ್ಲು ಗ್ರಾಮದ ಪಿ ಆರ್ ಯಶೋಚಂದ್ರ.  ಕಾರಣ, ಏನೆಕಲ್ಲು ಏನೆಕಲ್ಲು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯಿಂದ ಜಮೀನು ಅತಿಕ್ರಮಣ ಹಾಗು ಕಿರುಕುಳ ವಿರೋಧಿಸಿ.

ಉಪವಾಸ ಸತ್ಯಾಗ್ರಹದ ಬಗ್ಗೆ ಮಾತನಾಡಿದ ಯಶೋಚಂದ್ರ ಅವರು, ಏನೆಕಲ್ ಸೇವಾ ಸಹಕಾರಿ ಸಂಘದ ಸ್ಥಾಪಕರು ನನ್ನ ತಂದೆಯವರಾದ  ಪಿ ಎಸ್ ರಾಮಣ್ಣ ಮಾಸ್ಟರ್ ರವರು. ಆರಂಭದಲ್ಲಿ ಸ್ವಂತ ಕಟ್ಟಡ ಇಲ್ಲದ ಕಾರಣ ನಮ್ಮ ಮನೆಯಲ್ಲೇ ಅವಕಾಶ ಕೊಟ್ಟು ಸಂಘ ಕೆಲಸ ಮಾಡಲು ಅನುವು ಮಾಡಿ ಕೊಟ್ಟಿದ್ದರು.ಆ ಬಳಿಕ 1955 ರಲ್ಲಿ 23 ಸೆಂಟ್ಸ್ ಜಾಗ ದಾನ ಮಾಡಿ ಈಗ ಗೋದಾಮು ಆಗಿರುವ ಮೂಲ ಕಟ್ಟಡ ನಿರ್ಮಿಸಿದರು. ಬಡತನವೇ ‘ಬಂಡವಾಳ’ವಾಗಿದ್ದ ಆ ಕಾಲದಲ್ಲಿ ಅತಿ ಕಷ್ಟದಿಂದ ಸಂಘದ ನಿರ್ವಹಣೆ ಮಾಡಿದ್ದರು.ಸಂಘಕ್ಕೆ ಭೇಟಿಕೊಡುವ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಊಟೋಪಚಾರವೂ ನಮ್ಮ ಮನೆಯಲ್ಲೇ ಉಚಿತವಾಗಿತ್ತು. ದಿ ಕುಕ್ಕಪ್ಪನ ಮನೆ ಮುತ್ತಪ್ಪ ಮಾಸ್ತರ್ ಬೇಂಕಿನ ಲೆಕ್ಕಪತ್ರ ಬರೆಯುವ ಕೆಲಸ ಉಚಿತವಾಗಿ ಮಾಡಿದ್ದರು.ನಂತರ ಬಂದ ಆಡಳಿತ ಮಂಡಳಿ ರಾಜಕೀಯ ದ್ವೇಷದಿಂದ ನಮ್ಮ ತಂದೆಯವರಿಗೆ ಕಿರುಕುಳ ಕೊಟ್ಟಿದ್ದರು. ಸಂಘಕ್ಕೆ ನಮ್ಮ ಮನೆಯ ತ್ಯಾಗದ ಹಿನ್ನೆಲೆ ಲವಲೇಶವೂ ಅರಿಯದ ಈಗಿನ ಆಡಳಿತ ಮಂಡಳಿಯೂ ಸ್ವ ಪ್ರತಿಷ್ಠೆ ಮತ್ತು ಉಡಾಪೆಯಿಂದ ವರ್ತಿಸುತ್ತಿದ್ದು ನನ್ನ ಒಪ್ಪಿಗೆಯಿಲ್ಲದೆ ಮೂಲ 23 ಸೆಂಟ್ಸ್ ಜಾಗವನ್ನು ವಿಸ್ತರಿಸಿ ಪಟ್ಟಾ ಮತ್ತು ಕುಮ್ಕಿ ಸೇರಿ ಅರ್ಧ ಎಕರೆಯಷ್ಟು ಜಾಗ ಅತಿಕ್ರಮಿಸಿದೆ. ಹಾಗಿದ್ದರೂ  ದರ್ಪ ಮತ್ತು ಗೌರವ ರಹಿತವಾಗಿ ವರ್ತಿಸಿದೆ. ಇದನ್ನು ಪ್ರತಿಭಟಿಸಿ ಡಿ.31 ರಿಂದು ಆರಂಭಿಸಿದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇನೆ ಎಂದು ತಿಳಿಸಿದ್ದಾರೆ. ಸದ್ಯ ಕೆಲವು ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ, ಅದರ ಜೊತೆಗೆ ಉಪವಾಸ ಸತ್ಯಾಗ್ರಹದ ಬಗ್ಗೆ ಇಲಾಖೆಗಳಿಗೆ ಪೂರ್ವ ಮಾಹಿತಿ ನೀಡಿರಲಿಲ್ಲ. ಇದೀಗ ಸಹಕಾರಿ ಸಂಘದ ಚುನಾವಣೆಯೂ ಇರುವುದರಿಂದ  ಚುನಾವಣೆ ನಂತರ ಮುಂದಿನ ಹೋರಾಟ ನಡೆಸಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

10 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

10 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

11 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

19 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

19 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago