Advertisement
ಸುದ್ದಿಗಳು

ಏನೆಕಲ್ಲಿನಲ್ಲಿ ನ್ಯಾಯಕ್ಕಾಗಿ ಏಕಾಂಗಿ ಪ್ರತಿಭಟನೆ….!

Share

ಏನೆಕಲ್ಲು : ಏನೆಕಲ್ಲು ಗ್ರಾಮದ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಿಂದ ಅನ್ಯಾಯ ನಡೆದಿದೆ ಎಂದು ಆರೋಪಿಸಿ  ಏಕಾಂಗಿಯಾಗಿ ಸಹಕಾರಿ ಸಂಘದ ಬಳಿ ಶೆಡ್ ನಿರ್ಮಿಸಿ 3 ದಿನಗಳಿಂದ ಸತ್ಯಾಗ್ರಹ ನಡೆಸಿ ಗುರುವಾರ ಸಂಜೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಘಟನೆ ನಡೆದಿದೆ.

ನ್ಯಾಯಕ್ಕಾಗಿ 3 ದಿನಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದವರು  ಏನೆಕಲ್ಲು ಗ್ರಾಮದ ಪಿ ಆರ್ ಯಶೋಚಂದ್ರ.  ಕಾರಣ, ಏನೆಕಲ್ಲು ಏನೆಕಲ್ಲು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯಿಂದ ಜಮೀನು ಅತಿಕ್ರಮಣ ಹಾಗು ಕಿರುಕುಳ ವಿರೋಧಿಸಿ.

ಉಪವಾಸ ಸತ್ಯಾಗ್ರಹದ ಬಗ್ಗೆ ಮಾತನಾಡಿದ ಯಶೋಚಂದ್ರ ಅವರು, ಏನೆಕಲ್ ಸೇವಾ ಸಹಕಾರಿ ಸಂಘದ ಸ್ಥಾಪಕರು ನನ್ನ ತಂದೆಯವರಾದ  ಪಿ ಎಸ್ ರಾಮಣ್ಣ ಮಾಸ್ಟರ್ ರವರು. ಆರಂಭದಲ್ಲಿ ಸ್ವಂತ ಕಟ್ಟಡ ಇಲ್ಲದ ಕಾರಣ ನಮ್ಮ ಮನೆಯಲ್ಲೇ ಅವಕಾಶ ಕೊಟ್ಟು ಸಂಘ ಕೆಲಸ ಮಾಡಲು ಅನುವು ಮಾಡಿ ಕೊಟ್ಟಿದ್ದರು.ಆ ಬಳಿಕ 1955 ರಲ್ಲಿ 23 ಸೆಂಟ್ಸ್ ಜಾಗ ದಾನ ಮಾಡಿ ಈಗ ಗೋದಾಮು ಆಗಿರುವ ಮೂಲ ಕಟ್ಟಡ ನಿರ್ಮಿಸಿದರು. ಬಡತನವೇ ‘ಬಂಡವಾಳ’ವಾಗಿದ್ದ ಆ ಕಾಲದಲ್ಲಿ ಅತಿ ಕಷ್ಟದಿಂದ ಸಂಘದ ನಿರ್ವಹಣೆ ಮಾಡಿದ್ದರು.ಸಂಘಕ್ಕೆ ಭೇಟಿಕೊಡುವ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಊಟೋಪಚಾರವೂ ನಮ್ಮ ಮನೆಯಲ್ಲೇ ಉಚಿತವಾಗಿತ್ತು. ದಿ ಕುಕ್ಕಪ್ಪನ ಮನೆ ಮುತ್ತಪ್ಪ ಮಾಸ್ತರ್ ಬೇಂಕಿನ ಲೆಕ್ಕಪತ್ರ ಬರೆಯುವ ಕೆಲಸ ಉಚಿತವಾಗಿ ಮಾಡಿದ್ದರು.ನಂತರ ಬಂದ ಆಡಳಿತ ಮಂಡಳಿ ರಾಜಕೀಯ ದ್ವೇಷದಿಂದ ನಮ್ಮ ತಂದೆಯವರಿಗೆ ಕಿರುಕುಳ ಕೊಟ್ಟಿದ್ದರು. ಸಂಘಕ್ಕೆ ನಮ್ಮ ಮನೆಯ ತ್ಯಾಗದ ಹಿನ್ನೆಲೆ ಲವಲೇಶವೂ ಅರಿಯದ ಈಗಿನ ಆಡಳಿತ ಮಂಡಳಿಯೂ ಸ್ವ ಪ್ರತಿಷ್ಠೆ ಮತ್ತು ಉಡಾಪೆಯಿಂದ ವರ್ತಿಸುತ್ತಿದ್ದು ನನ್ನ ಒಪ್ಪಿಗೆಯಿಲ್ಲದೆ ಮೂಲ 23 ಸೆಂಟ್ಸ್ ಜಾಗವನ್ನು ವಿಸ್ತರಿಸಿ ಪಟ್ಟಾ ಮತ್ತು ಕುಮ್ಕಿ ಸೇರಿ ಅರ್ಧ ಎಕರೆಯಷ್ಟು ಜಾಗ ಅತಿಕ್ರಮಿಸಿದೆ. ಹಾಗಿದ್ದರೂ  ದರ್ಪ ಮತ್ತು ಗೌರವ ರಹಿತವಾಗಿ ವರ್ತಿಸಿದೆ. ಇದನ್ನು ಪ್ರತಿಭಟಿಸಿ ಡಿ.31 ರಿಂದು ಆರಂಭಿಸಿದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇನೆ ಎಂದು ತಿಳಿಸಿದ್ದಾರೆ. ಸದ್ಯ ಕೆಲವು ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ, ಅದರ ಜೊತೆಗೆ ಉಪವಾಸ ಸತ್ಯಾಗ್ರಹದ ಬಗ್ಗೆ ಇಲಾಖೆಗಳಿಗೆ ಪೂರ್ವ ಮಾಹಿತಿ ನೀಡಿರಲಿಲ್ಲ. ಇದೀಗ ಸಹಕಾರಿ ಸಂಘದ ಚುನಾವಣೆಯೂ ಇರುವುದರಿಂದ  ಚುನಾವಣೆ ನಂತರ ಮುಂದಿನ ಹೋರಾಟ ನಡೆಸಲಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

11 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

21 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

22 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

22 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago