ನಮ್ಮೂರ ಸುದ್ದಿ

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

3 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

11 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

11 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

12 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

12 hours ago