ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…