Advertisement
ನಮ್ಮೂರ ಸುದ್ದಿ

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

Share

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

8 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

9 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

11 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

15 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

15 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago