ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…