ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…