Advertisement
ನಮ್ಮೂರ ಸುದ್ದಿ

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

Share

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago