ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…