Advertisement
ನಮ್ಮೂರ ಸುದ್ದಿ

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

Share

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

1 hour ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

3 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

4 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago