Advertisement
ನಮ್ಮೂರ ಸುದ್ದಿ

ಏನೆಕಲ್ಲಿನಲ್ಲಿ ಬಾವಿ ತೆಗೆಯುವಾಗ ಸಿಕ್ಕಿತು ಹಳೆಕಾಲದ ಹಾರೆ

Share

ಏನೆಕಲ್ಲು: ಏನೆಕಲ್ಲು ಗ್ರಾಮದ ಕುಕ್ಕಪ್ಪನಮನೆ ತರವಾಡು ಮನೆಯಲ್ಲಿ ಲಕ್ಷ್ಮಣ ಗೌಡ ಎಂಬವರು ಶನಿವಾರ ಬಾವಿ ತೋಡುತ್ತಿರುವ ಸಂದರ್ಭದಲ್ಲಿ ಸುಮಾರು 150 ವರ್ಷಕ್ಕೂ ಹಿಂದಿನ ಹಾರೆ ಪತ್ತೆಯಾಗಿದೆ.
ಕುಕ್ಕಪ್ಪನಮನೆಯ ದಯಾನಂದ ಗೌಡರ ಅಜ್ಜ ದಿ.ಅಣ್ಣಪ್ಪ ಗೌಡರು 150 ವರ್ಷಗಳ ಹಿಂದೆ ಬಾವಿ ಅಗೆಯುತ್ತಿದ್ದರು.ಬಾವಿಯ ಕಾಮಗಾರಿ ನಡೆಯುತ್ತಿದ್ದಾಗ ಅದನ್ನು ನಿಲ್ಲಿಸಿ ಊಟಕ್ಕೆಂದು ಮನೆಗೆ ಬಂದರು.ಆದರೆ ಹಿಂದುರುಗಿ ಹೋಗುವಾಗ ನೀರಿನ ಒಸರು ಹಾಗೂ ಜೇಡಿ ಮಣ್ಣಿನ ಕಾರಣದಿಂದ ಬಾವಿ ಸಂಪೂರ್ಣ ಕುಸಿದಿತ್ತು. ಹಾರೆ ಮತ್ತು ಬಿದಿರಿನ ಏಣಿ ಮಣ್ಣಿನ ಅಡಿಗೆ ಸಿಲುಕಿಕೊಂಡಿತು ಎಂದು ಲಕ್ಷ್ಮಣ ಗೌಡರಿಗೆ ಹಿರಿಯರಿಂದ ತಿಳಿದು ಬಂದಿತ್ತು. ಬಳಿಕ ತರವಾಡು ಮನೆಯಲ್ಲಿ ನಡೆದ ಅಷ್ಟಮಂಗಲ ಚಿಂತನೆಯಲ್ಲಿ ಇದೇ ಜಾಗವನ್ನು ತೋರಿಸಿ ಇಲ್ಲಿ ಬಾವಿ ತೆಗೆದರೆ ನೀರು ದೊರಕುತ್ತದೆ ಎಂದು ಕಂಡು ಬಂದಿತ್ತು.ಆ ಪ್ರಕಾರವಾಗಿ ಲಕ್ಷ್ಮಣ ಗೌಡರು ಬಾವಿಯನ್ನು ತೋಡಿಸತೊಡಗಿದ್ದರು.ಸುಮಾರು 35 ಅಡಿ ಕೊರೆದಾಗ ಮಣ್ಣಿನೊಳಗೆ ಹಳೆಯ ಹಾರೆ(ಗುದ್ದಲಿ) ಕಂಡು ಬಂತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

12 minutes ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

2 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

7 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago