ಏನೆಕಲ್ಲು: ರೈತಸಂಘದ ನೂತನ ಗ್ರಾಮ ಘಟಕಕ್ಕೆ ಅಧಿಕಾರ ಹಸ್ತಾಂತರ

February 13, 2020
5:36 PM

ಏನೆಕಲ್ಲು: ಸುಳ್ಯ ತಾಲೂಕಿನ ಏನೆಕಲ್ಲು ಗ್ರಾಮದ ರೈತ ಸಂಘದ ನೂತನ ಗ್ರಾಮ ಘಟಕಕ್ಕೆ ಆಧಿಕಾರ ಹಸ್ತಾಂತರ, ಪ್ರದೇಶದ ಸಮಸ್ಯೆಗಳ ಕುರಿತು ಚಿಂತನ ಸಭೆ ಮತ್ತು ಹಿರಿಯ ಸಾಧಕ ರೈತರಿಗೆ ಸನ್ಮಾನ ಏನೆಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಗ್ರಾಮ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಮರಮಾಲೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಕೃಷಿ ಕ್ಷೇತ್ರ ಹಾಗೂ ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ರೈತರು ಒಗ್ಗಟ್ಟಾಗಬೇಕು, ದೇಶಕಟ್ಟುವಲ್ಲಿ ತ್ಯಾಗಕ್ಕೆ ಸಿದ್ದರಾಗಬೇಕೆಂದು ಕರೆನೀಡಿದರು.

ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್, ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ ಮಜಿಗುಂಡಿ,ಸುಳ್ಯ ತಾಲೂಕು ಅಧ್ಯಕ್ಷರಾದ ಲೋಲಾಜಾಕ್ಷ ಗೌಡ ಭೂತಕಲ್ಲು, ತಾಲೂಕು ಸಂಚಾಲಕರಾದ ಸೆಬಾಸ್ಟಿಯನ್, ಲೋಕಯ್ಯ ಗೌಡ ಹಾಗೂ ಐವರ್ನಾಡು ಗ್ರಾಮ ಘಟಕದ ಅಧ್ಯಕ್ಷರಾದ ನೂಜಾಲು ಪದ್ಮನಾಭ ಹಾಗೂ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು.

ಪ್ರಾಸ್ತಾವಿಕವಾಗಿ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಮಾತಾನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror