ಏನೆಕಲ್ಲು: ಸುಳ್ಯ ತಾಲೂಕಿನ ಏನೆಕಲ್ಲು ಗ್ರಾಮದ ರೈತ ಸಂಘದ ನೂತನ ಗ್ರಾಮ ಘಟಕಕ್ಕೆ ಆಧಿಕಾರ ಹಸ್ತಾಂತರ, ಪ್ರದೇಶದ ಸಮಸ್ಯೆಗಳ ಕುರಿತು ಚಿಂತನ ಸಭೆ ಮತ್ತು ಹಿರಿಯ ಸಾಧಕ ರೈತರಿಗೆ ಸನ್ಮಾನ ಏನೆಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಗ್ರಾಮ ಘಟಕದ ಅಧ್ಯಕ್ಷರಾದ ಬಾಲಕೃಷ್ಣ ಮರಮಾಲೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಕೃಷಿ ಕ್ಷೇತ್ರ ಹಾಗೂ ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ರೈತರು ಒಗ್ಗಟ್ಟಾಗಬೇಕು, ದೇಶಕಟ್ಟುವಲ್ಲಿ ತ್ಯಾಗಕ್ಕೆ ಸಿದ್ದರಾಗಬೇಕೆಂದು ಕರೆನೀಡಿದರು.
ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್, ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ ಮಜಿಗುಂಡಿ,ಸುಳ್ಯ ತಾಲೂಕು ಅಧ್ಯಕ್ಷರಾದ ಲೋಲಾಜಾಕ್ಷ ಗೌಡ ಭೂತಕಲ್ಲು, ತಾಲೂಕು ಸಂಚಾಲಕರಾದ ಸೆಬಾಸ್ಟಿಯನ್, ಲೋಕಯ್ಯ ಗೌಡ ಹಾಗೂ ಐವರ್ನಾಡು ಗ್ರಾಮ ಘಟಕದ ಅಧ್ಯಕ್ಷರಾದ ನೂಜಾಲು ಪದ್ಮನಾಭ ಹಾಗೂ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು.
ಪ್ರಾಸ್ತಾವಿಕವಾಗಿ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಮಾತಾನಾಡಿದರು.
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…