ಸುಬ್ರಹ್ಮಣ್ಯ : ಏನೆಕಲ್ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಬಚ್ಚನಾಯಕ ದೇವಳದ ಮುಂಭಾಗದ ನದಿಯಲ್ಲಿನ ದೇವರ ಗುಂಡಿಗೆ ಮೀನು ಹಿಡಿಯಲು ಬಂದಿದ್ದ ಐವರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ .
ಬಂಧಿತ ವ್ಯಕ್ತಿಗಳು ಬೆಳ್ತಂಗಡಿ ನಿವಾಸಿ ಇಸ್ಮಾಯಿಲ್(45) ಉಪ್ಪಿನಂಗಡಿ ನಿವಾಸಿಗಳಾದ ನೌಷಾದ್(28) ಫವಾಝ (25)ಇಬ್ರಾಹಿಂ (32)ಹಾಗೂ ಸ್ಥಳೀಯ ಏನೆಕಲ್ ನಿವಾಸಿ ಕೇಶವ ಮಾದನ ಮನೆ (40) ಎಂಬವರಾಗಿದ್ಧಾರೆ. ಗುರುವಾರ ರಾತ್ರಿ ವೇಳೆ ಐವರು ನದಿಯಲ್ಲಿ ದೇವರ ಮೀನು ಇರುವ ಜಾಗದಲ್ಲಿ ಗಾಳ ಹಾಕುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ .ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊoಡಿದದ್ಧಾರೆ.ಶುಕ್ರವಾರ ಕಡಬ ತಹಸೀಲ್ದಾರ್ ಕಚೇರಿಗೆ ಒಪ್ಪಿಸಲಾಗಿದ್ದು ಬಳಿಕ ಅವರು ಜಾಮೀನು ಮೂಲಕ ಬಿಡುಗಡೆಯಾಗಿದ್ಧಾರೆ ಎನ್ನಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…