ಸುಬ್ರಹ್ಮಣ್ಯ : ಏನೆಕಲ್ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಬಚ್ಚನಾಯಕ ದೇವಳದ ಮುಂಭಾಗದ ನದಿಯಲ್ಲಿನ ದೇವರ ಗುಂಡಿಗೆ ಮೀನು ಹಿಡಿಯಲು ಬಂದಿದ್ದ ಐವರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ .
ಬಂಧಿತ ವ್ಯಕ್ತಿಗಳು ಬೆಳ್ತಂಗಡಿ ನಿವಾಸಿ ಇಸ್ಮಾಯಿಲ್(45) ಉಪ್ಪಿನಂಗಡಿ ನಿವಾಸಿಗಳಾದ ನೌಷಾದ್(28) ಫವಾಝ (25)ಇಬ್ರಾಹಿಂ (32)ಹಾಗೂ ಸ್ಥಳೀಯ ಏನೆಕಲ್ ನಿವಾಸಿ ಕೇಶವ ಮಾದನ ಮನೆ (40) ಎಂಬವರಾಗಿದ್ಧಾರೆ. ಗುರುವಾರ ರಾತ್ರಿ ವೇಳೆ ಐವರು ನದಿಯಲ್ಲಿ ದೇವರ ಮೀನು ಇರುವ ಜಾಗದಲ್ಲಿ ಗಾಳ ಹಾಕುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ .ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊoಡಿದದ್ಧಾರೆ.ಶುಕ್ರವಾರ ಕಡಬ ತಹಸೀಲ್ದಾರ್ ಕಚೇರಿಗೆ ಒಪ್ಪಿಸಲಾಗಿದ್ದು ಬಳಿಕ ಅವರು ಜಾಮೀನು ಮೂಲಕ ಬಿಡುಗಡೆಯಾಗಿದ್ಧಾರೆ ಎನ್ನಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…