ಸುಬ್ರಹ್ಮಣ್ಯ : ಏನೆಕಲ್ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಬಚ್ಚನಾಯಕ ದೇವಳದ ಮುಂಭಾಗದ ನದಿಯಲ್ಲಿನ ದೇವರ ಗುಂಡಿಗೆ ಮೀನು ಹಿಡಿಯಲು ಬಂದಿದ್ದ ಐವರು ವ್ಯಕ್ತಿಗಳು ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ .
ಬಂಧಿತ ವ್ಯಕ್ತಿಗಳು ಬೆಳ್ತಂಗಡಿ ನಿವಾಸಿ ಇಸ್ಮಾಯಿಲ್(45) ಉಪ್ಪಿನಂಗಡಿ ನಿವಾಸಿಗಳಾದ ನೌಷಾದ್(28) ಫವಾಝ (25)ಇಬ್ರಾಹಿಂ (32)ಹಾಗೂ ಸ್ಥಳೀಯ ಏನೆಕಲ್ ನಿವಾಸಿ ಕೇಶವ ಮಾದನ ಮನೆ (40) ಎಂಬವರಾಗಿದ್ಧಾರೆ. ಗುರುವಾರ ರಾತ್ರಿ ವೇಳೆ ಐವರು ನದಿಯಲ್ಲಿ ದೇವರ ಮೀನು ಇರುವ ಜಾಗದಲ್ಲಿ ಗಾಳ ಹಾಕುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ .ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಸುಬ್ರಹ್ಮಣ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ .ಸ್ಥಳೀಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊoಡಿದದ್ಧಾರೆ.ಶುಕ್ರವಾರ ಕಡಬ ತಹಸೀಲ್ದಾರ್ ಕಚೇರಿಗೆ ಒಪ್ಪಿಸಲಾಗಿದ್ದು ಬಳಿಕ ಅವರು ಜಾಮೀನು ಮೂಲಕ ಬಿಡುಗಡೆಯಾಗಿದ್ಧಾರೆ ಎನ್ನಲಾಗಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…