ಏ21ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

April 15, 2019
11:07 AM

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಏ.21ರಿಂದ ಮೇ.21ರವರೆಗೆ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಹಿಂದೂ ಧರ್ಮದ ನಂಬಿಕೆಗಳು ಮತ್ತು ಆಚರಣೆಗಳ ಹಿಂದಿರುವ ವೈಜ್ಞಾನಿಕ ಕಾರಣಗಳು, ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದರು.

Advertisement
Advertisement
Advertisement

ಉದ್ಘಾಟನಾ ಕಾರ್ಯಕ್ರಮ:
ಏ.21ರಂದು ಪೂ.10.30ಕ್ಕೆ ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಪ್ರತಿಷ್ಠಾನದ ವೇದ ಅಧ್ಯಾಪಕ ಸುದರ್ಶನ ಭಟ್ ಉಜಿರೆ, ಶಂಕರ ಭಟ್ ಪುತ್ತೂರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror